ನಡೆಸಿತು.
Advertisement
ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಮುಂಬರುವ 2018ರ ವಿಧಾನಸಭಾ ಚುನಾವಣೆ ಕುರಿತು ಯಾವ ಕಾರ್ಯ ತಂತ್ರಗಳನ್ನು ಮಾಡಬೇಕು, ಪಕ್ಷದ ಗೆಲುವಿಗೆ ಮುಖಂಡರು, ಕಾರ್ಯಕರ್ತರು ಏನು ಮಾಡಬೇಕು. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಹೇಗೆ ಪರಿಣಾಮಕಾರಿಯಾಗಿಸಬೇಕು. ಮಹಿಳಾ ವಿಭಾಗ, ಕಾಂಗ್ರೆಸ್ ವಿವಿಧ ಸೆಲ್ಗಳು ಕ್ರಿಯಾಶೀಲವಾಗಿ ಕೆಲಸ ಮಾಡುವಂತೆ ಪಾಠ ಮಾಡುತ್ತಿದ್ದರು. ಈ ವಿಷಯ ಬಿಜೆಪಿ, ಬಜರಂಗ ದಳ, ಎಬಿವಿಪಿ ಮತ್ತಿತರ ಸಂಘಟನೆ ಪ್ರಮುಖರಿಗೆ ಗೊತ್ತಾಯಿತು. ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದಐದು ಜನರು ಒಂದು ಕಡೆ ಸೇರುವಂತಿಲ್ಲ, ಈ ಸಂದರ್ಭದಲ್ಲಿ ಹೋರಾಟ, ಪ್ರತಿಭಟನೆ, ಸಭೆ, ಸಮಾರಂಭ ನಡೆಸುವಂತಿಲ್ಲ, ದೇಶದ್ರೋಹದಂತಹ ಘೋಷಣೆ, ಕೋಮು ವಿರೋಧಿ ಘೋಷಣೆಗಳನ್ನು ಕೂಗುವಂತಿಲ್ಲ. ಗುಂಪು ಗುಂಪಾಗಿ ಸೇರುವಂತಿಲ್ಲ. ಬೈಕ್ ರ್ಯಾಲಿ ನಡೆಸುವಂತಿಲ್ಲ. ನ. 10ರವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾದರೆ ಕಾಂಗ್ರೆಸ್ ಪಕ್ಷದವರಿಗೆ ಹೇಗೆ ಅನುಮತಿ ನೀಡಲಾಯಿತು ಎಂದು ಪ್ರಶ್ನಿಸಿದರು.