Advertisement

ಪದಕ ಗೆದ್ದ ಸಿಂಧುಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ

08:38 PM Aug 01, 2021 | Team Udayavani |

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಕಂಚಿನ ಪದಕ ಗೆಲ್ಲುವ ಮೂಲಕ ಭಾರತ ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

Advertisement

ಸಿಂಧುಗೆ ಅಭಿನಂದನೆ ತಿಳಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಂಧು ಅವರ ಪ್ರದರ್ಶನ ರಾಷ್ಟ್ರಗಳ ಸಮೂಹದಲ್ಲಿ ನಮ್ಮ ಭಾರತ ಶ್ರೇಷ್ಠ ಭಾರತ ಎಂಬುದನ್ನು ಸಾಬೀತು ಮಾಡಿದೆ. ಸಿಂಧು ಅವರ ಅದ್ಭುತ ಸಾಧನೆಯನ್ನು ಶ್ಲಾಘಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಭಾರ ಎತ್ತುವ ಸ್ಪರ್ಧೆಯಲ್ಲಿ ಮೀರಾ ಭಾಯ್ ಚಾನು ಅವರು ರಜತ ಪದಕ ಪಡೆದಾಗ ಇದು ಇತರ ಅಥ್ಲೀಟ್ ಗಳಿಗೂ ಸ್ಫೂರ್ತಿ ನೀಡಲಿದೆ ಎಂದು ತಾವು ನೀಡಿದ್ದ ಹೇಳಿಕೆಯನ್ನು ಸ್ಮರಿಸಿದ್ದಾರೆ.  “ನನ್ನ ಮಾತುಗಳು ನಿಜವಾಗಿವೆ. ಮುಂದಿನ ದಿನಗಳಲ್ಲಿ ಭಾರತವು ಇನ್ನೂ ಹೆಚ್ಚಿನ ಪದಕಗಳನ್ನು ಗೆಲ್ಲಲಿ ಎಂದು ಕಾಗೇರಿ ಶುಭ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next