Advertisement

ಯುದ್ಧಕ್ಕೂ ಮೊದಲು ಕಾಂಗ್ರೆಸ್ ಶಸ್ತ್ರತ್ಯಾಗ ಮಾಡಿದೆ: ಸಚಿವ ಕೆ ಸುಧಾಕರ್

03:18 PM Oct 27, 2020 | keerthan |

ಬೆಂಗಳೂರು: ಉಪಚುನಾವಣೆಗೆ ಒಂದು ವಾರ ಇರುವಾಗಲೇ ಸೋಲಿಗೆ ನೆಪಗಳನ್ನು ಹುಡುಕುತ್ತಿರುವ ಕಾಂಗ್ರೆಸ್ ನಾಯಕರ ವರಸೆ ನೋಡಿದರೆ ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

Advertisement

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದಿದ್ದಾರೆ.

ದಿನೇಶ್ ಗುಂಡೂರಾವ್ ಅವರ ಟ್ವೀಟ್ ಮಾಡಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ. ಬಿಜೆಪಿ ಪಕ್ಷ ಈಗಾಗಲೇ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಂಡು ಜನರ ಮೇಲೆ ಪ್ರಭಾವ ಬೀರುತ್ತಿದೆ. ಆರ್.ಆರ್ ನಗರದಲ್ಲಿ ಹಣ ಮತ್ತು ಸೆಟ್‌ಟಾಪ್ ಬಾಕ್ಸ್ ವಿತರಣೆ ಮಾಡಿದ್ದರೂ ಚುನಾವಣಾ ಅಯೋಗ ಮೌನವಾಗಿದೆ. ಚುನಾವಣಾ ಆಯೋಗ ಕೇವಲ ಬೆದರು ಬೊಂಬೆಯೇ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ, ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ

ಈ ಟ್ವೀಟನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕೆ ಸುಧಾಕರ್, ಉಪಚುನಾವಣೆಗಳ ಮತದಾನಕ್ಕೆ ಇನ್ನೂ ಒಂದು ವಾರ ಇರುವಾಗಲೇ ಸೋಲಿಗೆ ನೆಪಗಳನ್ನು ಹುಡುಕುತ್ತಿರುವ ಕಾಂಗ್ರೆಸ್ ನಾಯಕರ ವರಸೆ ನೋಡಿದರೆ ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದಂತಿದೆ. ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದು ಆರ್.ಆರ್. ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next