Advertisement

ಕಾಂಗ್ರೆಸ್‌ ಸೇರ್ಪಡೆ: ಸಿಎಂ ಜತೆ ವಿಜಯಶಂಕರ್‌ ಮಾತುಕತೆ 

06:45 AM Nov 30, 2017 | |

ಮೈಸೂರು: ಕಾಂಗ್ರೆಸ್‌ ಸೇರ್ಪಡೆಗೆ ಒಲವು ತೋರಿರುವ ಮಾಜಿ ಸಚಿವ ಸಿ. ಎಚ್‌.ವಿಜಯಶಂಕರ್‌ ಅವರು ಬುಧವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದರು.

Advertisement

ಸಿದ್ದರಾಮಯ್ಯ ಅವರ ಸಹೋದರನ ಪುತ್ರನ ಮದುವೆ ಹಿನ್ನೆಲೆಯಲ್ಲಿ ಸಿದ್ದರಾಮನ ಹುಂಡಿಗೆ ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ವಿಜಯಶಂಕರ್‌ ಅವರು ಪಕ್ಷ ಸೇರ್ಪಡೆ ಸಂಬಂಧ ಮಾತುಕತೆ ನಡೆಸಿದ್ದು, ಯಾವಾಗ ಪಕ್ಷ ಸೇರ್ಪಡೆ ಎಂಬುದು ಇನ್ನೂ ನಿಗದಿಯಾಗಿಲ್ಲ.

ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಮನನೊಂದು ಆ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಜಯಶಂಕರ್‌ ಅವರು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಬೆಂಬಲಿಗರು, ಹಿತೈಷಿಗಳ ಸಲಹೆಯಂತೆ ಕಾಂಗ್ರೆಸ್‌ ಸೇರ್ಪಡೆಗೆ ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆ ಮೇರೆಗೆ ಸಂಸದ ಆರ್‌.ಧ್ರುವನಾರಾಯಣ ಹಾಗೂ ಶಾಸಕ ಎಚ್‌.ಪಿ.ಮಂಜುನಾಥ್‌ ಅವರು ವಿಜಯಶಂಕರ್‌ ಮನೆಗೆ ತೆರಳಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು

Advertisement

Udayavani is now on Telegram. Click here to join our channel and stay updated with the latest news.

Next