Advertisement

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

01:49 AM Apr 28, 2024 | Team Udayavani |

ಸಂಭಲ್‌: ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಮ ರಿಗೆ ಗೋಹತ್ಯೆ ಮಾಡಲು ಮುಕ್ತ ಅವಕಾಶ ನೀಡಲಿದೆ. ಈ ಭರವಸೆಯನ್ನು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಆರೋಪಿಸಿದ್ದಾರೆ.

Advertisement

ಉತ್ತರ ಪ್ರದೇಶದ ಸಂಭಲ್‌ನಲ್ಲಿ ಶನಿ ವಾರ ಪ್ರಚಾರ ನಡೆಸಿದ ಅವರು, “ನಾಚಿಕೆ ಇಲ್ಲದ ಜನರು (ಕಾಂಗ್ರೆಸ್‌) ಗೋಮಾಂಸ ಸೇವಿಸುವ ಹಕ್ಕನ್ನು ನೀಡುವ ಬಗ್ಗೆ ಭರವಸೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನ ಈ ನಡೆಯನ್ನು ಭಾರತ ಯಾವತ್ತಾದರೂ ಸ್ವೀಕರಿಸಲು ಸಾಧ್ಯವಿದೆಯೇ’ ಎಂದು ಪ್ರಶ್ನಿಸಿದರು.

ಅಲ್ಪಸಂಖ್ಯಾಕರಿಗೆ ತಮ್ಮ ಇಷ್ಟದಂತೆ ಆಹಾರ ಸೇವಿಸುವ ಹಕ್ಕನ್ನು ನೀಡುವುದಾಗಿ ಕಾಂಗ್ರೆಸ್‌ ಹೇಳಿದೆ. ಅದರರ್ಥ ಕಾಂಗ್ರೆಸ್‌ ಗೋ ಹತ್ಯೆಗೆ ಅವಕಾಶ ಮಾಡಿಕೊಡಲು ಹೊರಟಿದೆ ಎಂದು ಯೋಗಿ ಆದಿತ್ಯನಾಥ ಆರೋಪಿಸಿದ್ದಾರೆ.
ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋ ಧ್ಯೆಯ ಶ್ರೀರಾಮನ ದರ್ಶನಕ್ಕೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ಜನ ರಾಮನ ಅಸ್ತಿತ್ವವನ್ನು ಪ್ರಶ್ನಿಸಿದ್ದರು ಎಂದೂ ಯೋಗಿ ಆರೋಪಿಸಿದರು.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲೇನಿದೆ?
ದೇಶದ ಇತರ ನಾಗರಿಕರಂತೆ ಅಲ್ಪಸಂಖ್ಯಾಕರಿಗೂ ತಮ್ಮ ಆಯ್ಕೆಯ ಅನುಸಾರ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನು ಪಾಲನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಕಾಂಗ್ರೆಸ್‌ನ ಪ್ರಣಾಳಿಕೆಯ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾಕರ ವಿಭಾಗದಲ್ಲಿ ತಿಳಿಸಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next