Advertisement

ಸುಮಲತಾಗೆ ಕಾಂಗ್ರೆಸ್‌ ಕೂಡ ಬೆಂಬಲಿಸಿದೆ: ಸಿಎಂ ಎಚ್‌ಡಿಕೆ ಹೇಳಿದ್ದೇನು?

09:01 AM Apr 06, 2019 | Team Udayavani |

ಚಿಕ್ಕಮಗಳೂರು: ಮಂಡ್ಯದಲ್ಲಿ ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ. ಅವರಿಗೆ ಬಿಜೆಪಿ, ಕಾಂಗ್ರೆಸ್‌ ಮತ್ತು ರೈತ ಸಂಘದ ಬೆಂಬಲವಿದೆ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

Advertisement

ಎಲ್ಲರೂ ಒಂದಾಗಿ ಜೆಡಿಎಸ್‌ ಮಣಿಸಲು ಚಕ್ರವ್ಯೂಹ ರಚಿಸಿದ್ದಾರೆ.ಮಂಡ್ಯದ ಜನರು ಎಲ್ಲವನ್ನೂ ಮೆಟ್ಟಿ ನಿಲ್ಲುತ್ತಾರೆ. ಎಲ್ಲದಕ್ಕೂ ಮೇ 23 ರಂದು ಉತ್ತರ ನೀಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಮಂಡ್ಯದಲ್ಲಿ ಮೂರು ತಿಂಗಳಿನಿಂದ ಜೆಡಿಎಸ್‌ ಅಭ್ಯರ್ಥಿ ಕುರಿತು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದೇ ಬೇರೆ , ವಾಸ್ತವ ಸ್ಥಿತಿಯೇ ಬೇರೆ ಎಂದಿದ್ದಾರೆ.

ಇದೇ ವೇಳೆ ಮಂಡ್ಯ ಬಿಟ್ಟು ಬೇರೆಲ್ಲೂ ಚುನಾವಣೆ ನಡೆಯುತ್ತಿಲ್ಲವೆ ಎಂದು ಖಾರವಾಗಿ ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next