Advertisement

ಕೈ-ದಳ ಮುಖಂಡರ ಜತೆ ರಣತಂತ್ರ ಹೆಣೆದ ಎಚ್‌ಡಿಕೆ

11:21 PM May 13, 2019 | Team Udayavani |

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಸರ್ಕಾರದ ಮುಖಂಡರು ನಗರದ ಖಾಸಗಿ ಹೋಟೆಲ್‍ನಲ್ಲಿ ಸೋಮವಾರ ಸಭೆ ನಡೆಸಿದರು.

Advertisement

ಸಚಿವರಾದ ಡಿ.ಕೆ. ಶಿವಕುಮಾರ್‌, ಜಮೀರ್‌ ಅಹ್ಮದ್‌, ಆರ್‌.ವಿ. ದೇಶಪಾಂಡೆ, ಸಂಸದ ಡಿ.ಕೆ. ಸುರೇಶ್‌, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಎಚ್‌. ಕೋನರಡ್ಡಿ, ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ ಮೊದಲಾದವರು ಭಾಗಿಯಾಗಿದ್ದರು.

ಮೈತ್ರಿ ಪಕ್ಷದ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಗೆಲುವಿಗೆ ರಣತಂತ್ರದ ಬಗ್ಗೆ ಚರ್ಚಿಸಿದರು ಎಂದು ತಿಳಿದುಬಂದಿದೆ. ಸಭೆ ನಂತರ ಸಂಜೆ 5:40ರ ಸುಮಾರಿಗೆ ಕುಮಾರಸ್ವಾಮಿ ಪ್ರಚಾರಕ್ಕಾಗಿ ಕುಂದಗೋಳಕ್ಕೆ ಪ್ರಯಾಣ ಬೆಳೆಸಿದರು. ಸಿಎಂ ಕುಂದಗೋಳಕ್ಕೆ ಪ್ರಯಾಣಿಸುವಾಗ ಮಾಧ್ಯಮದವರು ಅವರತ್ತ ಸುಳಿಯದಂತೆ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next