Advertisement

ಅನರ್ಹಗೊಳಿಸಲು ಕಾಂಗ್ರೆಸ್‌ ಮನವಿ

01:12 AM Jul 12, 2019 | Sriram |

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸುವಂತೆ ಸ್ಪೀಕರ್‌
ರಮೇಶ್‌ ಕುಮಾರ್‌ಗೆ ನೀಡಿದ್ದ ದೂರಿಗೆ ಕಾಂಗ್ರೆಸ್‌ ನಾಯಕರು ವಿವರಣೆ ನೀಡಿದ್ದಾರೆ.

Advertisement

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ನಿಯೋಗ ಗುರುವಾರ ಸ್ಪೀಕರ್‌ ರಮೇಶ್‌ ಕುಮಾರ್‌ ಅವರನ್ನು ಭೇಟಿ ಮಾಡಿ, ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ್‌ ಕುಮಟಳ್ಳಿ ಅವರನ್ನು ಅನರ್ಹಗೊಳಿಸಲು ನೀಡಿದ್ದ ದೂರಿಗೆ ವಿವರಣೆ ನೀಡಿದ್ದಾರೆ. ಅಲ್ಲದೇ ಅವರನ್ನು ಅನರ್ಹಗೊಳಿಸುವಂತೆ ಮನವಿ ಮಾಡಿದ್ದಾರೆ. ಗೋಕಾಕ್‌ ಶಾಸಕ ರಮೇಶ್‌
ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ್‌ ಕುಮಟಳ್ಳಿ ಜನವರಿ 2019ರಲ್ಲಿ ಪಕ್ಷದ ವಿಪ್‌ ಉಲ್ಲಂ ಸಿ ಪಕ್ಷದ ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್‌ ವತಿಯಿಂದ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಅದೇ ಪ್ರಕರಣದ ಹಿನ್ನೆಲೆಯಲ್ಲಿ ಇಬ್ಬರು ಶಾಸಕರನ್ನು ಅನರ್ಹಗೊಳಿಸುವಂತೆ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಇಬ್ಬರೂ ಶಾಸಕರಿಂದ ಸ್ಪೀಕರ್‌ ಲಿಖೀತ ವಿವರಣೆ ಕೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next