Advertisement

ಟ್ವೀಟ್‌ ಮೂಲಕ ಶಾಗೆ ಪ್ರಶ್ನೆ

01:18 AM Feb 22, 2019 | Team Udayavani |

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರಶ್ನೆಗಳನ್ನು ಕೇಳಿದೆ.

Advertisement

ಕಳೆದ ಬಾರಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸಿದ ತಾವು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3 ಲಕ್ಷ ಕೋಟಿ ಅನುದಾನ ನೀಡಿದೆ ಎಂದು ಹೇಳಿದ್ದೀರಿ. ರಾಜ್ಯದ ಜನರಿಗೆ 3 ಲಕ್ಷ ಕೋಟಿಯ ಲೆಕ್ಕ ಕೊಡುವಿರಾ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಮಹದಾಯಿ, ಕಾವೇರಿ ವಿವಾದ ಬಗೆಹರಿಸಲು ಪ್ರಯತ್ನಿಸಲಿಲ್ಲ. ರೈತರ ಸಾಲ ಮನ್ನಾ ಮಾಡಲಿಲ್ಲ. ಬೆಂಗಳೂರಿಗೆ ಸಬರ್ಬನ್‌ ರೈಲು ಬರಲಿಲ್ಲ. ಕೊಡಗು ಅತಿವೃಷ್ಟಿಗೆ ಸ್ಪಂದಿಸಲಿಲ್ಲ. ಬರ ಪರಿಹಾರದಲ್ಲಿ ತಾರತಮ್ಯ ಮಾಡಲಾಗಿದೆ. ಸಂವಿಧಾನ ಬದ್ದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ನಿರಂತರ ಪ್ರಯತ್ನ, ಆಪರೇಷನ್‌ ಕಮಲ ನಿಮ್ಮ ಸಾಧನೆಯೇ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next