Advertisement

ರಾಜೀನಾಮೆ ಸಲ್ಲಿಸಿರುವ ರವೀಂದ್ರನಾಥ್ ಬೆಂಬಲಕ್ಕೆ ಕಾಂಗ್ರೆಸ್ ಇದೆ: ಡಿ.ಕೆ.ಶಿವಕುಮಾರ್

06:38 PM May 11, 2022 | Team Udayavani |

ಬೆಂಗಳೂರು : ಸೇವೆಗೆ ರಾಜೀನಾಮೆ ಸಲ್ಲಿಸಿರುವ ಡಿಜಿಪಿ ರವೀಂದ್ರನಾಥ್ ಬೆಂಬಲಕ್ಕೆ ಕಾಂಗ್ರೆಸ್ ನಿಂತಿದ್ದು, ಸಚಿವ ಪ್ರಭು ಚೌಹಾಣ್ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ತಕ್ಷಣ ವಜಾಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರ ಪಡದುಕೊಂಡ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ನಿರ್ದೇಶನಾಲಯದಿಂದ ರವೀಂದ್ರನಾಥ್ ನೋಟಿಸ್ ನೀಡಿದ್ದರು. ಈ‌ ಹಿನ್ನೆಲೆಯಲ್ಲಿ ಅವರನ್ನು ಹಠಾತ್ ವರ್ಗಾವಣೆ ಮಾಡಲಾಗಿತ್ತು. ಮನನೊಂದು ಅವರು ಸೇವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸರಕಾರ ಈ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಎಂ.ಬಿ.ಪಾಟೀಲ್ ಹೇಳಿಕೆಯೇ ಮುಖ್ಯ,ನೋ ಕಾಮೆಂಟ್ಸ್ : ಸಿದ್ದರಾಮಯ್ಯ ಕಿಡಿ

ದಲಿತ ಸಮುದಾಯಕ್ಕೆ ಸೇರಿದ ರವೀಂದ್ರನಾಥ ದಕ್ಷ ಐಪಿಎಸ್ ಅಧಿಕಾರಿ. ಈ ಸರಕಾರದಲ್ಲಿ ದಕ್ಷರು ಹಾಗೂ‌ ಪ್ರಾಮಾಣಿಕರಿಗೆ ಬೆಲೆ ಇಲ್ಲ. ದಿನಕ್ಕೊಂದು ಹಗರಣ ಬಯಲಿಗೆ ಬರುತ್ತಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಆಪ್ತ ಕೆಂಪಯ್ಯ ಅವರಿಗೆ ರವೀಂದ್ರನಾಥ್ ನೋಟಿಸ್ ನೀಡಿರುವುದು ನನಗೆ ಗೊತ್ತಿಲ್ಲ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷಯಾಗಬೇಕು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next