Advertisement

Congress ಬೆಂಚು ಖಾಲಿಯಾಗಲಿವೆ: ಡಾ| ವೈ. ಭರತ್‌ ಶೆಟ್ಟಿ

11:08 PM Feb 16, 2024 | Team Udayavani |

ಮಂಗಳೂರು: ಪ್ರಕರಣ ದಾಖಲಾದವರನ್ನು ಅಮಾನತು ಮಾಡುತ್ತಾ ಹೋದರೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬೆಂಚುಗಳು ಖಾಲಿಯಾಗಲಿವೆ ಎಂದು ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ ಹೇಳಿದರು.

Advertisement

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನನ್ನು ಹಾಗೂ ಶಾಸಕ ವೇದವ್ಯಾಸ ಕಾಮತ್‌ ಅವರನ್ನು ಅಮಾನತು ಮಾಡುವಂತೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ಕಾಂಗ್ರೆಸ್‌ ಮುಖಂಡ ಐವನ್‌ ಡಿ’ಸೋಜಾ ಹಾಗೂ ಇತರರು ಮನವಿ ಸಲ್ಲಿಸಿದ್ದಾರೆ. ಕೋಮುವಾದ ಕೇವಲ ಬಿಜೆಪಿಗೆ ಹಿಂದುಗಳಿಗೆ ಎಂದು ಲೇಬಲ್‌ ಅಂಟಿಸಿದಂತಿದೆ. ಶಾಲೆಯ ಶಿಕ್ಷಕಿಯ ತಪ್ಪು ತಿಳಿದೂ ಸಮುದಾಯದ ಪರವಾಗಿ ಮಾತನಾಡುವ ಐವನ್‌ ಕೂಡ ಓರ್ವ ಕೋಮುವಾದಿಯಾಗಿದ್ದಾರೆ. ಹಲವಾರು ಪ್ರಕರಣದಲ್ಲಿ ಇದು ಸಾಬೀತಾಗಿದೆ. ನಾವೂ
ಕೂಡ ಅವರನ್ನು ಗಡೀಪಾರು ಮಾಡಿ ಎಂದು ಒತ್ತಾಯಸಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next