Advertisement

ಕಾಂಗ್ರೆಸ್‌, ಬಿಜೆಪಿ ಸರಣಿ ಸಭೆ ಇಂದು

07:35 AM Sep 16, 2017 | Team Udayavani |

ಬೆಂಗಳೂರು: ವಿಧಾನ ಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೆಸ್‌ಮತ್ತು  ಬಿಜೆಪಿಯ ರಾಜ್ಯ ಉಸ್ತುವಾರಿಗಳು  ಮೇಲಿಂದ ಮೇಲೆ ಪೈಪೋಟಿಗೆ ಬಿದ್ದವರಂತೆ ತಮ್ಮ ತಮ್ಮ ಪಕ್ಷಗಳ ಮುಖಂಡರ ಸಭೆಗಳನ್ನು ನಡೆಸಿ ಚುನಾವಣೆ ಎದುರಿಸಲು ಈಗಿನಿಂದಲೇ ಭಾರಿ ಸಿದ್ದತೆ ಆರಂಭಿಸಿದ್ದಾರೆ.

Advertisement

ಶನಿವಾರ 16 ರಂದು ಕಾಂಗ್ರೆಸ್‌ ಉಸ್ತುವಾರಿಯಾದ ಕೆ.ಸಿ.ವೇಣುಗೋಪಾಲ ಪಕ್ಷದ ಕಚೇರಿಯಲ್ಲಿ ದಿನವಿಡೀ ವಿವಿಧ ಘಟಕಗಳ, ಬೆಂಗಳೂರು ನಗರ ಶಾಸಕರ ಸಭೆಯನ್ನು ಕರೆದಿದ್ದರೆ, ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಸಹ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರ ಸಭೆಯನ್ನು ಕರೆದಿದ್ದಾರೆ.

ಎರಡೂ ಪಕ್ಷಗಳ ಉಸ್ತುವಾರಿಗಳು ಎಡೆಬಿಡದೇ ಸಭೆಗಳನ್ನು ನಡೆಸಿ ಚುನಾವಣೆ ಕಾರ್ಯತಂತ್ರಗಳನ್ನು ರೂಪಿಸತೊಡಗಿರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜ್ಯ ನಾಯಕರುಗಳನ್ನು ಕಾರ್ಯ ಪ್ರವೃತ್ತರನ್ನಾಗಿಸಿದೆ.

ಶನಿವಾರ ಬೆಳಿಗ್ಗೆ 11 ಗಂಟೆಗೆ ಪಕ್ಷದ ಮಾಧ್ಯಮ ಘಟಕ, ಸೊಸಿಯಲ್‌ ಮಿಡಿಯಾ ಹಾಗೂ ಐಟಿ ಸೆಲ್‌ಗ‌ಳ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಮಾಧ್ಯಮ ಹಾಗೂ ಸಾಮಾಜಿಕ ಜಾಲ ತಾಣಗಳ ಬಳಕೆ ಕುರಿತಂತೆ ಸಲಹೆಗಳನ್ನು ನೀಡಲಿದ್ದಾರೆ. ನಂತರ ಬಿಬಿಎಂಪಿ ಕಾರ್ಪೊರೇಟರ್‌ಗಳು ಮತ್ತು 2015 ರ ಬಿಬಿಎಂಪಿ ಕಾಂಗ್ರೆಸ್‌ ಅಭ್ಯರ್ಥಿಗಳ ಸಭೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next