Advertisement

ಬಾಗಲಕೋಟೆ:ಕೈ-ಬಿಜೆಪಿ ಮಾರಾಮಾರಿ;ಮಾಜಿ ಶಾಸಕ ಕಾಶಪ್ಪನವರ್‌ ಆಸ್ಪತ್ರೆಗೆ

03:23 PM Sep 06, 2018 | |

ಹುನಗುಂದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಗುರುವಾರ ನಡೆದಿದೆ. ಘರ್ಷಣೆಯಲ್ಲಿ ಮಾಜಿ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ್‌ ಸೇರಿದಂತೆ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  

Advertisement

ಚುನಾವಣೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಬಡಿದಾಟ ಆರಂಭವಾಗಿದ್ದು, ಈ ವೇಳೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರ ಕಾರಿನ ಮೇಲೆ ಕಲ್ಲುಗಳನ್ನು ತೂರಲಾಗಿದೆ. ಕಾಶಪ್ಪನವರ್‌ ಅವರ ಮೇಲೂ ಹಲ್ಲೆ ನಡೆದಿದೆ. ಪೊಲೀಸ್‌ ವಾಹನದ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. 

ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. 

ಕಾಶಪ್ಪನವರ್‌ ಸೇರಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಐವರು ಬೆಂಬಲಿಗರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಹುನಗುಂದದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next