Advertisement

ಕಾಂಗ್ರೆಸ್‌, ಬಿಜೆಪಿ ನಂಬಿಕೆಗೆ ಯೋಗ್ಯವಲ್ಲ: ದೇವೇಗೌಡ

10:18 AM Oct 30, 2019 | Team Udayavani |

ನವದೆಹಲಿ: ಕರ್ನಾಟಕದಲ್ಲಿ 15 ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್‌ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ಜತೆ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ಎರಡೂ ಪಕ್ಷಗಳು ನಂಬಿಕೆಗೆ ಯೋಗ್ಯವಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ವಾಗ್ಧಾಳಿ ನಡೆಸಿದ್ದಾರೆ.

Advertisement

ಪಿಟಿಐಗೆ ಸಂದರ್ಶನ ನೀಡಿರುವ ಅವರು, ಕಳೆದ ವಿಧಾನಸಭೆ ಚುನಾವಣೆ ಬಳಿಕ ಇಚ್ಛೆಯಿಲ್ಲದಿದ್ದರೂ ಕಾಂಗ್ರೆಸ್‌ ಜತೆ ಕೈಜೋಡಿಸಿದೆವು. ಚುನಾವಣೆ ಫ‌ಲಿತಾಂಶ ಬಂದ ಕೂಡಲೇ ಕಾಂಗ್ರೆಸ್‌ನವರು ನಮ್ಮ ಬಳಿ ಬಂದು ಸರಕಾರ ರಚನೆಗೆ ಬೇಡಿಕೆಯಿಟ್ಟರು. ಇದಕ್ಕೆ ಮೊದಲು ನಾನು ಒಪ್ಪಿಗೆ ಸೂಚಿಸಿರಲಿಲ್ಲ. ಅವರು ಬಲವಂತ ಮಾಡಿದ್ದಕ್ಕಾಗಿ ನಾವು ಒಪ್ಪಿಕೊಂಡೆವು ಎಂದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಳ್ಳಲಾಗುವುದು. ಈ ಎರಡೂ ಪಕ್ಷಗಳು ನಮ್ಮನ್ನು (ಜೆಡಿಎಸ್‌) ಬೇಕಾದಾಗ ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತವೆ. ಈ ಉಭಯ ಪಕ್ಷಗಳ ಧೋರಣೆ ಒಂದೇ ರೀತಿ ಇದೆ ಎಂದು ಕಿಡಿಕಾರಿದ್ದಾರೆ. ಇತ್ತೀಚೆಗೆ ಜೆಡಿಎಸ್‌ ರಾಜ್ಯದಲ್ಲಿ ಬಿಜೆಪಿ ಬಗ್ಗೆ ಮೃದು ಧೋರಣೆ ತಾಳಿದಂತೆ ಕಾಣುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡ, ಆ ರೀತಿ ಏನೂ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next