Advertisement

ಕೈ -ಬಿಜೆಪಿ ಮಾರಾಮಾರಿ: ಗೋಣಿಕೊಪ್ಪಲು ಉದ್ವಿಗ್ನ; 9 ಮಂದಿ ಸೆರೆ 

10:10 AM May 10, 2018 | Team Udayavani |

ವಿರಾಜಪೇಟೆ: ಚುನಾವಣೆಗೆ 2 ದಿಗಳಿರುವ ವೇಳೆ ಗೋಣಿಕೊಪ್ಪಲಿನಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು  ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 

Advertisement

ಬುಧವಾರ ರಾತ್ರಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಸ್ಥಳಕ್ಕೆ  ದೌಡಾಯಿಸಿದ ಪೊಲೀಸರು ಲಾಠಿ ಚಾರ್ಜ್‌ ನಡೆಸಿ 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಕೆಲ ಗಾಯಾಳುಗಳನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಸರ್ಕಾರಿ ಆಸ್ಪತ್ರೆಯಲ್ಲೂ  ಮಾರಾಮಾರಿ ನಡೆದಿದ್ದು,ಆಸ್ಪತ್ರೆ ಕಿಟಕಿ, ಪೀಠೊಪಕರಣ ಮತ್ತು ಗಾಜುಗಳನ್ನು ಒಡೆದು ಹಾಕಿದ್ದಾರೆ ಎನ್ನಲಾಗಿದೆ. 

ಮೂವರು ಕಾಂಗ್ರೆಸ್‌ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಐಸಿಯುನಲ್ಲಿದ್ದು ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಪೊಲೀಸರು ಪ್ರಕರಣ ದಾಖಲಿಸಕೊಂಡು ತನಿಖೆ ಮುಂದುವರಿಸಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next