Advertisement

ಕಾಂಗ್ರೆಸ್‌ ಜಾತಿ ಒಡೆಯುತ್ತೆ, ಬಿಜೆಪಿ ಕೂಡಿಸುತ್ತೆ: ಜಾವಡೇಕರ್‌

06:35 AM Mar 25, 2018 | Team Udayavani |

ಕೊಪ್ಪಳ: ಕಾಂಗ್ರೆಸ್‌ ಸರ್ಕಾರ ವೀರಶೈವ-ಲಿಂಗಾಯತದ ಹೆಸರಿನಲ್ಲಿ ಜಾತಿಗಳನ್ನು ಒಡೆಯುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಬಿಜೆಪಿ ಜಾತಿಗಳನ್ನು ಕೂಡಿಸುವ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ ಜಾವಡೇಕರ್‌ ಹೇಳಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜಾತಿಗಳನ್ನು ಒಡೆದಿದ್ದಾರೆ. ರಾಜ್ಯ ಸರ್ಕಾರದ ನಿರ್ಣಯವನ್ನು ಸ್ವತಃ ವೀರಶೈವ ಮಹಾಸಭಾವೇ ವಿರೋಧಿ ಸಿದೆ. ಕಾಂಗ್ರೆಸ್‌ ಜಾತಿ ಒಡೆಯುವ ಕೆಲಸ ಮಾಡಿದರೆ, ನಾವು
ಕೂಡಿಸುವ ಕೆಲಸ ಮಾಡಲಿದ್ದೇವೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ಮಾಡಲು ಬಿಜೆಪಿ ಸನ್ನದಟಛಿವಾಗಿದೆ. ಈಗಾಗಲೇ ದೇಶದ ಹಲವು ರಾಜ್ಯದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್‌ ಕೇವಲ 2 ರಾಜ್ಯಗಳಲ್ಲಿ ಮಾತ್ರ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಮುಂದೆ ಇಲ್ಲೂ ನೆಲೆ ಕಳೆದುಕೊಳ್ಳಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next