Advertisement

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ: ಕಾಂಗ್ರೆಸ್ ನಿಂದ 4 ಗಂಟೆಗಳ ಕಾಲ ಗುಜರಾತ್ ಬಂದ್

10:37 AM Sep 10, 2022 | Team Udayavani |

ಅಹಮದಾಬಾದ್: ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಶನಿವಾರ (ಸೆ.10) ಬೆಳಗ್ಗೆಯಿಂದ 4ಗಂಟೆಗಳ ಕಾಲ ಸಾಂಕೇತವಾಗಿ ಗುಜರಾತ್ ಬಂದ್ ಗೆ ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಇದನ್ನೂ ಓದಿ:ಜೈಲಿಂದ ಬಂದವರನ್ನು ಹೀರೋ ರೀತಿ ಸ್ವಾಗತಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ; ಮಮತಾಗೆ ಸುವೇಂದು

ವ್ಯಾಪಾರಸ್ಥರು, ಅಂಗಡಿ ಮಾಲೀಕರು, ಬಟ್ಟೆ ಮಾರುಕಟ್ಟೆ ಕಾರ್ಮಿಕರು, ಸಂಘ-ಸಂಸ್ಥೆಗಳು, ಸಣ್ಣ ವ್ಯಾಪಾರಿಗಳು ಬಂದ್ ಗೆ ಬೆಂಬಲ ನೀಡಬೇಕೆಂದು ಶುಕ್ರವಾರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಮನವಿ ಮಾಡಿಕೊಂಡಿದ್ದರು.

ಗುಜರಾತ್ ನಲ್ಲಿ ಭಾರತೀಯ ಜನತಾ ಪಕ್ಷ ಕಳೆದ 27ವರ್ಷಗಳಿಂದ ಆಡಳಿತ ನಡೆಸುತ್ತಿದ್ದು, ಹಣದುಬ್ಬರ, ನಿರುದ್ಯೋಗ, ಭ್ರಷ್ಟಾಚಾರ ಮಿತಿ ಮೀರಿದೆ. ಹಾಲು, ಮೊಸಲು, ಪನ್ನೀರ್ ನಂತಹ ದಿನಬಳಕೆ  ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ ಎಂದು ಠಾಕೂರ್ ಆರೋಪಿಸಿದ್ದಾರೆ.

ಬಂದ್ ವೇಳೆ ಯವುದೇ ಕಾರಣಕ್ಕೂ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸಬಾರದು ಎಂದು ಠಾಕೂರ್ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದರು. ಬಂದ್ ವೇಳೆ ತುರ್ತು ಸೇವೆಗಳಿಗೆ ಬಂದ್ ಅನ್ವಯಿಸುವುದಿಲ್ಲ ಎಂದು ಠಾಕೂರ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next