Advertisement

ಒಬಿಸಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್‌ ಕಾರಣ : ಸಿ.ಟಿ. ರವಿ

08:39 PM May 14, 2022 | Team Udayavani |

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದ ಕಾಂಗ್ರೆಸ್‌ ಬೆಂಬಲಿತ ಸರಕಾರವು ಸರಿಯಾಗಿ ಸಮರ್ಥನೆ ಮಾಡಿ ಹಿಂದುಳಿದ ವರ್ಗದ ಹಿತಾಸಕ್ತಿಯನ್ನು ಎತ್ತಿ ಹಿಡಿಯದ ಕಾರಣ ಹೀಗಾಗಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸತ್ಯವನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರಕಾರ ಹಿಂದುಳಿದ ವರ್ಗಗಳ ಪರ ಇದೆ. ದೇಶದಲ್ಲಿ ಮೊದಲ ಬಾರಿಗೆ ಸಂವಿಧಾನಬದ್ಧವಾಗಿ ಹಿಂದುಳಿದ ವರ್ಗಗಳಿಗೆ ಆಯೋಗ ರಚಿಸಿದ ಬಿಜೆಪಿ ಸರಕಾರ.

ನರೇಂದ್ರ ಮೋದಿಯವರ ಸರಕಾರ. ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next