Advertisement

ಮತದಾನಕ್ಕೆ ಮೂರು ದಿನ ಬಾಕಿ ಇರುವಾಗಲೇ ಕೋವಿಡ್‍ಗೆ ಕಾಂಗ್ರೆಸ್ ಅಭ್ಯರ್ಥಿ ಬಲಿ

07:07 PM Apr 14, 2021 | Team Udayavani |

ಭುಬನೇಶ್ವರ : ಓಡಿಸ್ಸಾದ ಪಿಪಿಲಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಿತ್ ಮಂಗರಾಜ್ ಇಂದು ಅಸುನೀಗಿದ್ದಾರೆ. ಮತದಾನಕ್ಕೆ ಮೂರು ದಿನ (ಏ.17) ಬಾಕಿ ಇರುವಾಗಲೇ ಕೋವಿಡ್ ಮಹಾಮಾರಿಗೆ ಅಜಿತ್ ಬಲಿಯಾಗಿದ್ದಾರೆ.

Advertisement

ಸದ್ಯ ನಡೆಯುತ್ತಿರುವ ಪಿಪಿಲಿ ವಿಧಾನಸಭೆಯ ಉಪಚುನಾವಣೆಗೆ ಅಜಿತ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದ್ದರು.ಕಳೆದ ವಾರ ಚುನಾವಣಾ ಪ್ರಚಾರದ ವೇಳೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಶನಿವಾರ ಅಜಿತ್ ಅವರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕನ ಅಕಾಲಿಕ ನಿಧನಕ್ಕೆ ಓಡಿಸ್ಸಾ ರಾಜ್ಯಪಾಲ ಗಣೇಶಿ ಲಾಲ್, ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ. ಹಾಗೂ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಚುನಾವಣೆ ಮುಂದಕ್ಕೆ ?

ಇನ್ನು ಪಿಪಿಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇದೇ 17 ರಂದು ಮತದಾನ ನಡೆಯಲಿದೆ. ಆದರೆ, ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಿತ್ ಮಂಗರಾಜ್ ಅವರ ಅಕಾಲಿಕ ನಿಧನವಾಗಿದೆ. ಈ ಹಿನ್ನೆಲೆ ಏಪ್ರಿಲ್ 17 ರಂದು ನಡೆಯಬೇಕಿದ್ದ ರದ್ದಾಗಲಿದ್ದು, ಮತ್ತೊಮ್ಮೆ ಚುನಾವಣಾ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next