Advertisement

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

09:15 PM Mar 28, 2024 | Team Udayavani |

ಮೈಸೂರು: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಹೇಳಿದರು.

Advertisement

ಒಕ್ಕಲಿಗ ಜಾತಿ ಸರ್ಟಿಫಿಕೆಟ್‌ ಕೊಟ್ಟವರು ಯಾರೆಂಬ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರು ತಾಲೂಕು ತಹಶೀಲ್ದಾರ್‌ ಕೊಟ್ಟ ಒಕ್ಕಲಿಗ 3ಎ ಜಾತಿ ಪ್ರಮಾಣ ಪತ್ರವನ್ನು ಪ್ರದರ್ಶಿಸಿದರು. ಜಾತಿಯನ್ನು ಯಾರೂ ಹಣೆಯ ಮೇಲೆ ಬರೆದುಕೊಳ್ಳುವುದಿಲ್ಲ ಎಂದರು.

ರಾಜ್ಯ ದಲ್ಲಿ ಕಾಂಗ್ರೆಸ್‌ ಪರ ಉತ್ತಮ ವಾತಾವರಣ ಸೃಷ್ಟಿಯಾಗುತ್ತಿದ್ದು, ಬಿಜೆಪಿಯವರು ಯಾವ ಹಂತಕ್ಕೆ ಬೇಕಾದರೂ ಹೋಗಲು ಸಿದ್ಧರಾಗಿದ್ದಾರೆ. ನಾನು ಒಕ್ಕಲಿಗ ಸಮುದಾಯದವನಲ್ಲ ಎನ್ನುವುದಕ್ಕೆ ಏನಾದರೂ ದಾಖಲೆ ಇದ್ದರೆ ಸಲ್ಲಿಸಲಿ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next