Advertisement

ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಅನಿಶ್ಚಿತ: ಪಾಟೀಲ್‌

09:48 AM Jan 22, 2018 | |

ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ನಡೆಸಲು ಬೇಕಾಗುವ 113 ಮ್ಯಾಜಿಕ್‌ ಅಂಕಿ ಬರುವವರೆಗೂ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಅನಿಶ್ಚಿತ. ಈ ಮ್ಯಾಜಿಕ್‌ ಅಂಕಿ ತಲುಪಿದ ಬಳಿಕ ಹೈಕಮಾಂಡ್‌ ಸಿಎಂ
ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್‌ಸಿ ಎಸ್‌.ಆರ್‌. ಪಾಟೀಲ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ 113 ಅಂಕಿ ತಲುಪಿ, ಪಕ್ಷದ ಶಾಸಕಾಂಗದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳುವ ಜತೆಗೆ ಹೈಕಮಾಂಡ್‌ ಅನುಮೋದನೆ ಪಡೆದ ಬಳಿಕ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬುದು 
ಘೋಷಣೆಯಾಗಲಿದೆ. ಅಲ್ಲಿಯವರೆಗೂ ಮುಂದಿನ ಸಿಎಂ ಅಭ್ಯರ್ಥಿ ಅನಿಶ್ಚಿತವಾಗಿದೆ ಎಂದರು. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಫೆ.22ರಿಂದ 24ರವರೆಗೆ ಮುಂಬೈ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಏಕಪಕ್ಷೀಯ ನಿರ್ಧಾರ ಎಂದೂ ತೆಗೆದುಕೊಂಡಿಲ್ಲ. ಅವರ ವಿರುದ್ಧ ಯಾರೂ ಪಕ್ಷದಲ್ಲಿ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next