Advertisement

ಸೋತು ಸೋತು ಸಾಕಾಗಿದೆ, ನನ್ನ ಗೆಲ್ಲಿಸಿ ಮುಖ್ಯಮಂತ್ರಿಯ ಕೊರಗು ನಿವಾರಿಸಿ: ಎಂ.ಲಕ್ಷ್ಮಣ್‌

10:28 PM Mar 29, 2024 | Team Udayavani |

ಮೈಸೂರು: ನನ್ನನ್ನು ಗೆಲ್ಲಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಮನವಿ ಮಾಡಿದರು.

Advertisement

ಜಿಲ್ಲೆಯ 8 ಕ್ಷೇತ್ರಗಳ ಅಲ್ಪಸಂಖ್ಯಾಕರ ಘಟಕದ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, 10 ವರ್ಷಗಳಿಂದ ಸ್ವಂತ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೋತಿರುವುದಕ್ಕೆ ಸಿದ್ದರಾಮಯ್ಯ ಮನಸ್ಸಿನಲ್ಲಿ ಕೊರಗಿದೆ. ಕುರುಬ ಸಮುದಾಯಕ್ಕೆ ಟಿಕೆಟ್‌ ನೀಡಿದ್ದರಿಂದ ಸೋಲಾಯಿತು ಎಂಬ ಕಾರಣ ಬಂದ ಹಿನ್ನೆಲೆಯಲ್ಲಿ ಈ ಬಾರಿ ಒಕ್ಕಲಿಗ ಸಮುದಾಯದ ನನಗೆ ಟಿಕೆಟ್‌ ಕೊಟ್ಟಿದ್ದಾರೆ. ಹೀಗಾಗಿ ಒಕ್ಕಲಿಗ ಸಮುದಾಯ ಮತ ನೀಡಿ ನನ್ನನ್ನು ಗೆಲ್ಲಿಸಬೇಕು.

ನಾನು ಸೋತು ಸೋತು ಸಾಕಾಗಿದೆ. ಕೊನೆಯದಾಗಿ ಕಾಂಗ್ರೆಸ್‌ ಪಕ್ಷ ಅವಕಾಶ ನೀಡಿದೆ. ಈ ಬಾರಿ ಸೋತರೆ ಸತ್ತಂತೆ ಎಂದು ಪುನರುಚ್ಚರಿಸಿದರು.
ಪ್ರತಾಪಸಿಂಹ ನನ್ನನ್ನು ಜೈಲಿಗೆ ಕಳುಹಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ. ಅವರ ವಿರುದ್ಧ ಮಾತನಾಡಬಾರದು ಎಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಇದಕ್ಕೆ ಕಾರಣ ಕೇಳಿದರೆ ಉತ್ತರಿಸುತ್ತಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next