Advertisement

Congress ಅಭ್ಯರ್ಥಿ ಮಹಾವೀರ ಮೋಹಿತೆ ನಾಮಪತ್ರ ಸಲ್ಲಿಕೆ

07:33 PM Apr 19, 2023 | Team Udayavani |

ಚಿಕ್ಕೋಡಿ: ರಾಯಬಾಗ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಮಹಾವೀರ ಮೋಹಿತೆ ಅಪಾರ ಬೆಂಬಲಿಗರೊಂದಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Advertisement

ರಾಯಬಾಗ ಪಟ್ಟಣದ ದಿಗ್ಗೆವಾಡಿ ಕ್ರಾಸ್ ದಿಂದ ತಹಶೀಲ್ದಾರರ ಕಚೇರಿಯವರಿಗೆ ಬೃಹತ್ ಮೆರವಣಿಗೆ ನಡೆಸಿ ಚುನಾವಣಾಧಿಕಾರಿ ಬಳಿ ಕಾಂಗ್ರೆಸ್ ಅಭ್ಯರ್ಥಿ ಮಹಾವೀರ ಮೋಹಿತೆ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು. ರಾಯಬಾಗ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ವಿಶ್ವಾಸ ಮೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ. ಶಾಸಕಿ ಲಕ್ದ್ಮೀ ಹೆಬ್ಬಾಳಕರ ಮಾರ್ಗದರ್ಶನದಲ್ಲಿ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ನನ್ನ ಗೆಲುವು ಖಚಿತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಯಬಾಗ ಕ್ಷೇತ್ರದಲ್ಲಿ ಕಳೆದ 10 ವರ್ಷದಿಂದ ಪಕ್ಷ ಸಂಘಟನೆ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಕ್ಷೇತ್ರದ ಮತದಾರರು ತಮ್ಮ ಸೇವೆ ಮಾಡಲು ನನಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರಾಯಬಾಗ ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೈಟಿಕ್ ಆಸ್ಪತ್ರೆ ನಿರ್ಮಾಣ. ಹೈಟಿಕ ಶಾಲೆಗಳು ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವ ಕೈಗಾರಿಕೆ ಸ್ಥಾಪನೆ ಮಾಡುವ ಗುರಿ ಇದೆ. ಕಾರ್ಯಕರ್ತರು ಅಪಾರವಾಗಿ ಬೆಂಬಲ ನೀಡಬೇಕು ಎಂದರು.

Advertisement

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ದ್ಮಣರಾವ ಚಿಂಗಳೆ, ಮುಖಂಡರಾದ ಸದಾಶಿವ ದೇಶಿಂಗೆ, ಅರ್ಜುನ ನಾಯಿಕವಾಡಿ, ರಾಜು ಕೊಟಗಿ, ರಾಜು ಪಾಟೀಲ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next