Advertisement

Lok Sabha Election: ಜನರ ಆಕ್ರೋಶದ ಬಳಿಕ ಜೈಪುರ ಅಭ್ಯರ್ಥಿಯ ಬದಲಿಸಿದ ಕಾಂಗ್ರೆಸ್‌

09:58 PM Mar 25, 2024 | Team Udayavani |

ಜೈಪುರ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಘೋಷಣೆ ಮಾಡಿದ್ದ ಅಭ್ಯರ್ಥಿ ಸುನೀಲ್‌ ಶರ್ಮಾ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುನೀಲ್‌, ಪಕ್ಷ ನನ್ನನ್ನು ರಕ್ಷಿಸಲಿಲ್ಲ ಎಂದು ಹೇಳಿದ್ದಾರೆ.

Advertisement

ಸುನೀಲ್‌ ಈ ಮೊದಲು ಬಲಪಂಥೀಯ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದಾರೆ ಹಾಗೂ ಜೈಪುರ ಡೈಯಲಾಗ್‌ ಎಂಬ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕಾಂಗ್ರೆಸ್‌ ನಾಯಕರಿಗೆ ಬೈದಿದ್ದರು ಎಂಬ ಕಾರಣಕ್ಕಾಗಿ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಶಶಿ ತರೂರ್‌ ಸೇರಿದಂತೆ ಹಲವು ನಾಯಕರು ಪಕ್ಷದ ಈ ನಡೆಗೆ ಅಸಮಾಧಾನ ಹೊರಹಾಕಿದ್ದರು.

ಹೀಗಾಗಿ ಸುನೀಲ್‌ ಅವರ ಬದಲಿಗೆ ಪ್ರತಾಪ್‌ ಸಿಂಗ್‌ ಖಚಾರಿಯಾವಾಸ್‌ ಅವರಿಗೆ ಟಿಕೆಟ್‌ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುನೀಲ್‌, “ಪಕ್ಷ ನನ್ನನ್ನು ರಕ್ಷಿಸಲಿಲ್ಲ. ಹೀಗಾಗಿ ನನಗೆ ಬೇಸರವಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಿದವರು ಕೊನೆಗೂ ಗೆದ್ದಿದ್ದಾರೆ’ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next