Advertisement

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

02:36 PM May 03, 2024 | Team Udayavani |

ರಾಯಚೂರು: ಗ್ಯಾರಂಟಿಗಳ ಹೆಸರಲ್ಲಿ ದಲಿತರಿಗೆ ದೊಡ್ಡ ಮೋಸವಾಗುತ್ತಿದೆ. ಈ ಸತ್ಯವನ್ನು ಜನರಿಗೆ ತಿಳಿಸಿ ಮನವರಿಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ತಿಳಿಸಿದರು.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಎಸ್ ಸಿಪಿ, ಟಿಎಸ್ ಪಿ ಹಣ ಬೇರೆ ಉದ್ದೇಶಕ್ಕೆ ಬಳಸಿದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಎಂದು ಕಾನೂನು ರೂಪಿಸಿದ ಕಾಂಗ್ರೆಸ್ ಸರ್ಕಾರ ಈಗ‌ ಎಸ್ ಸಿಪಿ ಟಿಎಸ್ ಪಿಗೆ ಮೀಸಲಿಟ್ಟಿದ್ದ 11,500 ಕೋಟಿ ಗ್ಯಾರೆಂಟಿಗೆ ಬಳಸಿದೆ. ಬಜೆಟ್ ಬಳಿಕವೂ 14 ಸಾವಿರ ಕೋಟಿ ಬಳಸಿಕೊಳ್ಳಲು ಮುಂದಾಗಿದೆ. ಅಂಬೇಡ್ಕರ್, ವಾಲ್ಕೀಕಿ, ಆದಿ ಜಾಂಬವ, ಭೋವಿ ಅಭಿವೃದ್ಧಿ ನಿಗಮಗಳಿಗೆ ಸಬ್ಸಿಡಿ ಹಣ ಸಂಪೂರ್ಣ ಕಡಿತಗೊಳಿಸಲಾಗಿದೆ. ಕ್ಷೇತ್ರಕ್ಕೆ ಒಂದೇ ಗಂಗಾ ಕಲ್ಯಾಣ ನೀಡಲಾಗಿದೆ. ಈ ಸತ್ಯಗಳನ್ನು ಜನರಿಗೆ ತಿಳಿಸಲು ಬಂದಿದ್ದೇವೆ ಎಂದರು.

ಎಸ್ ಸಿಪಿ, ಟಿಎಸ್ ಪಿ ಯೋಜನೆ ಮೊದಲು ಜಾರಿಗೆ ತರಲು ಮುಂದಾಗಿದ್ದೆ ಬಿಜೆಪಿ ಸರ್ಕಾರ. ಆದರೆ, ಸರ್ಕಾರ ಪತನಗೊಂಡ ಕಾರಣಕ್ಕೆ ಅದು ಜಾರಿಯಾಗಲಿಲ್ಲ ಎಂದು ತಿಳಿಸಿದರು.

ಒಳಮೀಸಲಾತಿ ಪರ ಇದ್ದೇನೆ ಎಂದಿದ್ದ ಸಿಎಂ ಸಿದ್ದರಾಮಯ್ಯ ಅಯ್ಯೋ ಅದೆಲ್ಲ ಮಾಡೋಕಾಗಲ್ಲ ಎಂದು ಉಲ್ಟಾ ಹೊಡೆದಿದ್ದರು. ದಲಿತ ಸಮಾಜವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next