Advertisement

ಸತೀಶ್‌ ಜಾರಕಿಹೊಳಿ ಮನವೊಲಿಕೆ ಸರ್ಕಸ್‌

09:25 AM Jan 31, 2018 | Team Udayavani |

ಬೆಂಗಳೂರು: ಜಾರಕಿಹೊಳಿ ಸೋದರರ ಭಿನ್ನಾಭಿಪ್ರಾಯ ಶಮನ ಮಾಡಲು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಸತೀಶ್‌ ಜಾರಕಿಹೊಳಿಯೊಂದಿಗೆ ಸುದೀರ್ಘ‌ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಯೂ ಮಾತುಕತೆ ನಡೆಸಿ, ಸತೀಶ್‌ ಅಸಮಾಧಾನ ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ. 

Advertisement

ಮಂಗಳವಾರ ವೇಣುಗೋಪಾಲ್‌ ಅವರು ಸತೀಶ್‌ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ, ನಂತರ ಸಿಎಂ ಸಮ್ಮುಖದ ಲ್ಲಿಯೂ ಸಮಾಲೋಚನೆ ನಡೆಸಿ ಅವರ ಮುನಿಸು ಕಡಿಮೆ ಮಾಡುವ ಪ್ರಯತ್ನ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಇರುವ ಗೊಂದಲಗಳ ನಿವಾರಣೆಗೆ ಸತೀಶ್‌ ಜಾರಕಿ ಹೊಳಿ ಸಿಎಂ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರ ಎದುರಿಗೆ ಹೇಳಿದ್ದರೂ, ಅವರು ತಲೆ ಕೆಡಿಸಿಕೊಳ್ಳದಿದ್ದರಿಂದ ಬುಧವಾರ ತಮ್ಮ ಬೆಂಬಲಿಗರ ಸಭೆ ಕರೆದು ಚರ್ಚಿಸಲು ನಿರ್ಧರಿಸಿದ್ದರು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತು  ಕೊಂಡ ವೇಣುಗೋಪಾಲ್‌ ಸತೀಶ್‌ರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತೀಶ್‌ ಜಾರಕಿಹೊಳಿ ಕಾಂಗ್ರೆಸ್‌ನ ದೊಡ್ಡ ನಾಯಕರು, ಅವರ ನಡೆಯಲ್ಲಿ ಯಾವುದೇ ಗೊಂದಲ ಇಲ್ಲ. ಅವರೊಂದಿಗೆ ಮಾತುಕತೆ ನಡೆಸಿರುವುದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಪ್ರತಿಕ್ರಿಯಿಸಿ, ಸತೀಶ್‌ ಅಸಮಾಧಾನಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. ಮುಖ್ಯಮಂತ್ರಿ ಭೇಟಿಯ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಯಾವುದೇ ಅಸಮಾಧಾನ ಇಲ್ಲ. ಬುಧವಾರ ಯಾವ
ಸಭೆಯನ್ನೂ ಕರೆದಿಲ್ಲ. ಫೆ.1 ರಂದು ಬೆಳಗಾವಿಯಲ್ಲಿ ಸಮಾವೇಶ ನಡೆಸುತ್ತಿದ್ದೇವೆ. ಆ ಸಮಾವೇಶದ ಕುರಿತು ವೇಣುಗೋಪಾಲ್‌ ಅವರ ಜೊತೆ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದರು.  

Advertisement

Udayavani is now on Telegram. Click here to join our channel and stay updated with the latest news.

Next