Advertisement

ಕ್ಯಾಂಪ್ಕೋ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್‌ ದೂರು

08:28 AM Apr 11, 2018 | Harsha Rao |

ಮಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಇದ್ದರೂ ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
ಅವರು ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವುದು ನೀತಿ ಸಂಹಿತೆ ಉಲ್ಲಂಘನೆ. ಹೀಗಾಗಿ ಅವರ ವಿರುದ್ಧ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್‌ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದೆ.

Advertisement

ಕ್ಯಾಂಪ್ಕೋ ಅಧ್ಯಕ್ಷರು ಸೋಮವಾರ ಖಾಸಗಿ ಹೊಟೇಲ್‌ನಲ್ಲಿ ಪತ್ರಿಕಾಗೋಷ್ಠಿ ಕರೆದು, ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ನೇತೃತ್ವದ ನಿಯೋಗ ವರದಿ ನೀಡಿದೆ ಎಂದು ಹೇಳಿದ್ದಾರೆ. ಸಂಸದ ಓಂಪ್ರಸಾದ್‌ ಯಾದವ್‌ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಸರಕಾರ ಅಡಿಕೆ ಕ್ಯಾನ್ಸರ್‌ಕಾರಕ ಎಂದು ಉತ್ತರಿಸಿತ್ತು. ಈ ಕುರಿತು ಚುನಾವಣಾ ಘೋಷಣೆಯ ಮೊದಲು ಕಾಂಗ್ರೆಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿತ್ತು. ಆದರೆ ಈಗ ಅಡಿಕೆ ಬೆಳೆಗಾರರು ಕಾಂಗ್ರೆಸ್‌ಗೆ ಮತ ನೀಡುತ್ತಾರೆ ಎಂಬ ಆತಂಕ ದಿಂದ ಬಿಜೆಪಿಯ ಕುಮ್ಮಕ್ಕಿನಂತೆ ಕ್ಯಾಂಪ್ಕೋ ಅಧ್ಯಕ್ಷರು ವರದಿ ಸಲ್ಲಿಕೆಯ ವಿಚಾರ ತಿಳಿಸಿದ್ದಾರೆ. 

ಕ್ಯಾಂಪ್ಕೋ ಅಧ್ಯಕ್ಷರು ಹಾಗೂ ಅದರ ಬಹುತೇಕ ಸದಸ್ಯರು ಬಿಜೆಪಿಯ ಬೆಂಬಲಿಗರಾಗಿದ್ದಾರೆ. ಹೀಗಾಗಿ ಅಧ್ಯಕ್ಷರ ವಿರುದ್ಧ ಕ್ರಮ ಜರಗಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಎ.ಸಿ. ವಿನಯರಾಜ್‌ ನೇತೃತ್ವದ ಕಾಂಗ್ರೆಸ್‌ ನಿಯೋಗ ದೂರಿನಲ್ಲಿ ಒತ್ತಾಯಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next