Advertisement

ಬಿಜೆಪಿ ವಿರುದ್ಧ ಎಸಿಬಿಗೆ ಕಾಂಗ್ರೆಸ್‌ ದೂರು

11:52 AM May 25, 2018 | Team Udayavani |

ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿರುವ ಬಿ.ಎಸ್‌.ಯಡಿಯೂರಪ್ಪ ಕಾಂಗ್ರೆಸ್‌ ಶಾಸಕರಿಗೆ ಹಣದ ಆಮಿಷ ಒಡ್ಡಿ ಭ್ರಷ್ಟಾಚಾರ ನಡೆಸಲು ಮುಂದಾಗಿದ್ದರು ಎಂದು ಆರೋಪಿಸಿ ಕಾಂಗ್ರೆಸ್‌ ಎಸಿಬಿಗೆ ದೂರು ನೀಡಿದೆ.

Advertisement

ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬಾರದ ಕಾರಣ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದ ಪಕ್ಷವಾಗಿದ್ದರಿಂದ ರಾಜ್ಯಪಾಲರು ಬಿಜೆಪಿಗೆ ಬಹುಮತ ಸಾಬೀತು ಪಡಿಸಲು ಅವಕಾಶ ಕಲ್ಪಿಸಿದ್ದರು. ಆದರೆ, ಪಕ್ಷಕ್ಕೆ ಅಗತ್ಯ ಬಹುಮತ ಇಲ್ಲದ ಕಾರಣ ಬಿಜೆಪಿ ನಾಯಕರಾದ ಯಡಿಯೂರಪ್ಪ, ಶ್ರೀರಾಮುಲು, ಬಿ.ಜೆ.ಪುಟ್ಟಸ್ವಾಮಿ, ಜನಾರ್ಧನ ರೆಡ್ಡಿ, ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ ರಾವ್‌, ಕಾಂಗ್ರೆಸ್‌ ಶಾಸಕರಿಗೆ ದೂರವಾಣಿ ಕರೆ ಮಾಡಿ ಅಡ್ಡ ಮತದಾನ ಮಾಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಕಾಂಗ್ರೆಸ್‌ ದೂರಿನಲ್ಲಿ ತಿಳಿಸಿದೆ.

ಅಲ್ಲದೇ ಯಡಿಯೂರಪ್ಪ ತಮ್ಮ ಬಹುಮತ ಸಾಬೀತು ಪಡಿಸುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ತಮ್ಮ ಭಾಷಣದಲ್ಲಿಯೇ ತಾವು ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಕಾರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದ್‌ರಾಜ್‌ ಎಸಿಬಿಗೆ ಸಲ್ಲಿಸಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next