Advertisement

ಚುನಾವಣಾಧಿಕಾರಿಗೆ ಕಾಂಗ್ರೆಸ್‌ ದೂರು

01:30 AM May 10, 2019 | Team Udayavani |

ಧಾರವಾಡ: ‘ಸಿ.ಎಸ್‌. ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ’ ಎಂಬ ಶಾಸಕ ಶ್ರೀರಾಮುಲು ಹೇಳಿಕೆ ಖಂಡಿಸಿ ಅವರ ವಿರುದ್ಧ ಸಂಸದ ವಿ.ಎಸ್‌. ಉಗ್ರಪ್ಪ ನೇತೃತ್ವದ ಕಾಂಗ್ರೆಸ್‌ ನಾಯಕರ ನಿಯೋಗ ಜಿಲ್ಲಾ ಚುನಾವಣಾಧಿಕಾರಿಗೆ ಗುರುವಾರ ದೂರು ನೀಡಿದೆ.

Advertisement

ಶ್ರೀರಾಮುಲು ಅಷ್ಟೇ ಅಲ್ಲದೆ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡ್ರ ವಿರುದ್ಧವೂ ಛಬ್ಬಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಬಿಡ್ನಾಳ ಹೆಸರಿನಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಪ್ರತಿ ಜೊತೆಗೆ ಶ್ರೀರಾಮುಲು ಹೇಳಿಕೆ ಇರುವ ಪೆನ್‌ಡ್ರೈವ್‌ನ್ನೂ ಚುನಾವಣಾಧಿಕಾರಿಗೆ ನೀಡಿದ್ದಾರೆ.

ಬಳಿಕ ಮಾತನಾಡಿದ ಸಂಸದ ವಿ.ಎಸ್‌. ಉಗ್ರಪ್ಪ, ‘ರಾಮುಲು ಹೇಳಿಕೆಯಲ್ಲಿ ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರದ ಕಿರುಕುಳ ಕಾರಣ ಎಂದಿರುವುದು ಸ್ಪಷ್ಟವಾಗಿದೆ. ಕಿರುಕುಳ ನೀಡಿ ಸತ್ತಿರುವುದು ಗೊತ್ತಿದ್ದರೆ ಇಷ್ಟು ದಿನ ಯಾಕೆ ಸುಮ್ಮನಿದ್ದರು? ಕೃತ್ಯದ ಮಾಹಿತಿ ಗೊತ್ತಿದ್ದೂ ಮುಚ್ಚಿಡುವ ಕಾರ್ಯ ಮಾಡಿದ್ದರೆ ಅದು ಕೂಡ ಅಪರಾಧ. ಇದನ್ನು ದೂರಿನಲ್ಲಿ ಪ್ರಸ್ತಾಪ ಮಾಡಿದ್ದೇವೆ’ ಎಂದರು.

ರಾಮುಲು ರಾಜಕೀಯಕ್ಕಾಗಿ ಸಾವನ್ನು ಬಳಸಿಕೊಳ್ಳುವ ಸಣ್ಣತನ ತೋರಿದ್ದಾರೆ. ಅವರಿಗೆ ದೇವರು ಸದ್ಬುದ್ಧಿ ಕೊಡಲಿ. ಕ್ಷಮೆ ಯಾಚಿಸುತ್ತಾರೆಂದು ಭಾವಿಸಿದ್ದೆ. ಆದರೆ ನನ್ನ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿದ್ದಾರೆ ಅಂತ ಹೇಳಿದ್ದಾರೆ. ಅವರು ನನ್ನ ಕ್ಷೇತ್ರದ ಮತದಾರ. ಹೀಗಾಗಿ ಅವರ ಹೇಳಿಕೆಗೆ ನಾನು ಕ್ಷಮೆ ಕೇಳುವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next