Advertisement

Mangaluru ಶಾಸಕ ವೇದವ್ಯಾಸ ಕಾಮತ್‌ ವಿರುದ್ಧ ಕಾಂಗ್ರೆಸ್‌ ದೂರು

01:02 AM Aug 22, 2024 | Team Udayavani |

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ವಿರುದ್ಧ ಕಾಂಗ್ರೆಸ್‌ ನಿಯೋಗ ಪೊಲೀಸರಿಗೆ ದೂರು ಸಲ್ಲಿಸಿದೆ. ಕಾಮತ್‌ ಅವರು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾರ ಹೇಳಿಕೆಯನ್ನು ತಿರುಚಿ ಅವಾಚ್ಯ ಶಬ್ದ ಬಳಸಿ ಕೋಮುಗಲಭೆ ಸೃಷ್ಟಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

Advertisement

ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್‌ನ ಮಾಹಿತಿ ಮತ್ತು ತಂತ್ರಜ್ಞಾನ ಘಟಕದ ಅಧ್ಯಕ್ಷ ಆಲಿಸ್ಟನ್‌ ಡಿ’ ಕುನ್ಹಾ ಅವರು ಪೊಲೀಸ್‌ ಆಯುಕ್ತರು ಮತ್ತು ಬರ್ಕೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಮುಖರು ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next