Advertisement

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ ದೂರು

08:57 PM May 06, 2023 | Team Udayavani |

ಬೆಂಗಳೂರು: ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ ಪಕ್ಷ ಚುನಾವಣ ಆಯೋಗಕ್ಕೆ ದೂರು ಸಲ್ಲಿಸಿದೆ.

Advertisement

ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೇ 3ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ಇಬ್ಬರು ನಾಯಕರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗೂಂಡಾ ರಾಜ್ಯ, ಮಾಫಿಯಾ ರಾಜ್ಯ ಬರುತ್ತದೆ. ಇಸ್ಲಾಮೀಕರಣ ಮತ್ತು ಭಯೋತ್ಪಾದನೆ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೇಳಿದ್ದಾರೆ. ಈ ರೀತಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇವರಿಬ್ಬರ ಹೇಳಿಕೆ ಕಾಂಗ್ರೆಸ್‌ ಮತ್ತು ಅದರ ನಾಯಕರ ತೇಜೋವಧೆ ಆಗಿದೆ. ಅಲ್ಲದೇ ಸಮಾಜದಲ್ಲಿ ಕ್ಷೋಭೆ ಹುಟ್ಟುಹಾಕುವಂಥದ್ದು ಮತ್ತು ಕೋಮಭಾವನೆಗಳನ್ನು ಕೆರಳಿಸುವಂಥದ್ದಾಗಿದೆ.

ರಾಜ್ಯದಲ್ಲಿ ಶಾಂತಿಯುತ ಮತ್ತು ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ತೇಜಸ್ವಿ ಸೂರ್ಯ ಹಾಗೂ ಗೌರವ್‌ ಭಾಟಿಯಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಇಬ್ಬರ ಚುನಾವಣ ಪ್ರಚಾರವನ್ನು ನಿಷೇಧಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next