Advertisement

ನಾವು ಪೂರ್ಣ ಬಹುಮತದೊಂದಿಗೆ ಗೋವಾದಲ್ಲಿ ಸರ್ಕಾರ ರಚಿಸಲಿದ್ದೇವೆ: ದಿನೇಶ್ ಗುಂಡೂರಾವ್

03:50 PM Feb 15, 2022 | Team Udayavani |

ಪಣಜಿ: ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೋವಾದ ಜನತೆ ಬಿಜೆಪಿಯನ್ನು ಕಿತ್ತೆಸೆಯಲು ಬಯಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತದಾನವಾಗಿದೆ. ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಿದೆ. ಪ್ರಸಕ್ತ ಬಾರಿ ನಾವು ಪೂರ್ಣ ಬಹುಮತದೊಂದಿಗೆ ಗೋವಾದಲ್ಲಿ ಸರ್ಕಾರ ರಚಿಸಲಿದ್ದೇವೆ ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಪಣಜಿಯಲ್ಲಿ ಮಾಧ್ಯಮಗಳಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ ಅವರು,  ಗೋವಾ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸ್ಫರ್ಧಿಸಿರುವ ಸಾಖಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ 89.61 ರಷ್ಟು ಮತದಾನವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು- ಸಿಎಂ ಪ್ರಮೋದ ಸಾವಂತ್ ರವರ ಮೇಲೆ ಜನ ಸಿಟ್ಟಿಗೆದ್ದಿದ್ದರಿಂದ ಅವರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಿದೆ. ಈ ಕ್ಷೇತ್ರದಲ್ಲಿ ಸಿಎಂ ಸಾವಂತ್ ಸೋಲು ಅನುಭವಿಸುವುದು ಗೊತ್ತಿದ್ದೇ ಅವರು ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ನಡೆಸಿದ್ದರು. ನಮ್ಮ ಕಾಂಗ್ರೇಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಗೋವಾ ಫೊರ್‍ವರ್ಡ್ ಪಕ್ಷ ಇವೆರಡೂ ಮೈತ್ರಿ ಮಾಡಿಕೊಂಡಿದೆ. ಮೈತ್ರಿ ಫಲಪ್ರದವಾಗಿದ್ದು ಸಂಪೂರ್ಣ ಬಹುಮತ ದೊರೆಯಲಿದೆ. ಗೋವಾದ ಜನತೆಗೆ ಸ್ಥಿರ ಸರ್ಕಾರ ಬೇಕು ಮತ್ತು ಸ್ಪಷ್ಟ ಜನಾದೇಶ ಸಿಗಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next