Advertisement

ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಅಪಾರ

07:03 AM Jan 19, 2019 | Team Udayavani |

ಚಿತ್ತಾಪುರ: ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಮಹತ್ವದ್ದಾಗಿದೆ. ಪಂಚವಾರ್ಷಿಕ ಹಾಗೂ ಬೃಹತ್‌ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಷ್ಟ್ರನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ಮಹಾಂತಪ್ಪ ಸಂಗಾವಿ ಹೇಳಿದರು.

Advertisement

ಪಟ್ಟಣದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ದೇಶದಲ್ಲಿ ಹೆದ್ದಾರಿ, ರೈಲು ಮಾರ್ಗ, ಸೇತುವೆಗಳ ನಿರ್ಮಾಣ, ಮೊಬೈಲ್‌, ಟಿ.ವಿ ಕ್ರಾಂತಿ ಆದದ್ದೆ ಕಾಂಗ್ರೆಸ್‌ ಅವಧಿಯಲ್ಲಿ ಎನ್ನುವುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕಿದೆ. ಬಿಜೆಪಿ ದೇಶದಲ್ಲಿ ಐದು ವರ್ಷಗಳ ಆಡಳಿತ ನಡೆಸಿದರೂ ಸಾಧನೆ ಮಾತ್ರ ಶೂನ್ಯವಾಗಿದೆ ಎಂದು ಹೇಳಿದರು.

ಜಿಲ್ಲೆ ತೀರಾ ಹಿಂದುಳಿದ ಜಿಲ್ಲೆ ಎಂದು ಖ್ಯಾತಿ ಪಡೆದಿದ್ದನ್ನು ಹೋಗಲಾಡಿಸಿ ರಾಜ್ಯದಲ್ಲಿಯೇ ಜಿಲ್ಲೆ ಅಭಿವೃದ್ಧಿಯಲ್ಲಿ ಮುಂದೆ ಇದೆ. ಇದಕ್ಕೆ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಕಾರಣ ಎಂದರು. ಕಾಂಗ್ರೆಸ್‌ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ತಾಲೂಕು ಅಧ್ಯಕ್ಷ ಸಾಬಣ್ಣ ವೈ. ಕಾಶಿ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಮುಖಂಡರಾದ ಮಲ್ಲಪ್ಪ ಹೊಸ್ಮನಿ ಇಂಗನಕಲ್‌, ಮಲ್ಲಿಕಾರ್ಜುನ ಬಮ್ಮನಳ್ಳಿ, ಆಸ್ತಿಕ್‌ ಮೌರ್ಯ, ಮಲ್ಲಿಕಾರ್ಜುನ ನೀಲೂರ, ಬಂದೆಪ್ಪ ಮಾತನಾಡಿದರು.

ಗುಂಡಗುರ್ತಿ ಗ್ರಾಪಂ ಅಧ್ಯಕ್ಷ ಲೋಹಿತ್‌ ಗಂಜಗಿರಿ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬೆಣ್ಣೂರಕರ್‌, ನಾಗಯ್ಯ ಗುತ್ತೇದಾರ, ಮಲ್ಲಿಕಾರ್ಜುನ ಮುಡಬೂಳಕರ್‌, ಶಿವಾಜಿ ಕಾಶಿ, ಶಿವಕಾಂತ ಬೆಣ್ಣೂರಕರ್‌ ಹಾಗೂ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next