Advertisement

ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ: ಎಂ.ಜಿ. ಮಹೇಶ್‌

10:36 PM Mar 31, 2023 | Team Udayavani |

ಮಂಗಳೂರು: ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲು ನೈತಿಕತೆಯಿಲ್ಲ, ಕಾಂಗ್ರೆಸ್‌ ಭ್ರಷ್ಟಾಚಾರದ ಗಂಗೋತ್ರಿ ಎಂದು ರಾಜ್ಯ ಬಿಜೆಪಿಯ ಪ್ರಧಾನ ವಕ್ತಾರ ಎಂ.ಜಿ. ಮಹೇಶ್‌ ಬಲ್ಲಾಳ್‌ಬಾಗ್‌ನಲ್ಲಿರುವ ಬಿಜೆಪಿಯ ನೂತನ ಮಾಧ್ಯಮ ಕಾರ್ಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

Advertisement

ಶುಕ್ರವಾರ ದ.ಕ. ಜಿಲ್ಲೆಯ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆಯ ಸಲುವಾಗಿ ಆಂತರಿಕ ಚುನಾವಣೆ ನಡೆದಿದ್ದು, ಎಲ್ಲ ಅಸೆಂಬ್ಲಿ ಕ್ಷೇತ್ರಗಳ ಮಂಡಲ, ಶಕ್ತಿ ಕೇಂದ್ರ, ತಾಲೂಕು, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಅಭ್ಯರ್ಥಿಗಳ ಭಾಗವಹಿಸಿದ್ದರು. ಆಯ್ಕೆ ಪ್ರಕ್ರಿಯೆ ರಹಸ್ಯವಾಗಿ ನಡೆಯುವುದರಿಂದ ಅಂತಿಮ ಆಯ್ಕೆಯನ್ನೂ ವರಿಷ್ಠರೇ ನಡೆಸುತ್ತಾರೆ ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಮುಖಂಡರಾದ ರವಿಶಂಕರ ಮಿಜಾರು, ರತನ್‌ ರಮೇಶ್‌ ಪೂಜಾರಿ, ಸಂಜಯ್‌ ಪ್ರಭು, ರಣದೀಪ್‌ ಕಾಂಚನ್‌, ಜಗದೀಶ ಶೇಣವ ಇದ್ದರು.

6 ವಿಭಾಗಗಳಲ್ಲಿ ಬಿಜೆಪಿ ಮಾಧ್ಯಮ ಕೇಂದ್ರ
ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಕಲಬುರಗಿ, ಬೆಳಗಾಂಗಳಲ್ಲಿ ಮಾಧ್ಯಮ ಕೇಂದ್ರ ಕಾರ್ಯನಿರ್ವಹಿಸಲಿವೆ ಎಂದು ಮಹೇಶ್‌ ತಿಳಿಸಿದರು.

ರಹಸ್ಯ ಪಟ್ಟಿ ವರಿಷ್ಠರ ಕೈಗೆ
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ ಆಂತರಿಕ ಚುನಾವಣೆ ನಡೆದಿದೆ. ಆಯ್ಕೆಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಬೆಂಗಳೂರಿಗೆ ಕಳುಹಿಸಿ, ಅಲ್ಲಿಂದ ದಿಲ್ಲಿಗೆ ರವಾನಿಸಲಾಗುತ್ತದೆ. ವರಿಷ್ಠರು ಅಭ್ಯರ್ಥಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಎ. 6-7ರ ಸುಮಾರಿಗೆ ಮೊದಲ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next