Advertisement

”ತುಘಲಕ್ ಮೋದಿ, ನಾಲಾಯಕ್ ಬಿಎಸ್ ವೈ”: ಟ್ವಿಟರ್ ನಲ್ಲಿ ಕಿಡಿಕಾರಿದ ಕಾಂಗ್ರೆಸ್

10:19 AM Aug 19, 2019 | keerthan |

ಬೆಂಗಳೂರು: ರಾಜ್ಯಕ್ಕೆ ನೆರೆ ಪರಿಹಾರ ನೀಡದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತುಘಲಕ್ ಎಂದು ಟೀಕಿಸಿರುವ ಕರ್ನಾಟಕ ಕಾಂಗ್ರೆಸ್ ರಾಜ್ಯಕ್ಕೆ ಪರಿಹಾರ ತರುವಲ್ಲಿ ವಿಫಲರಾದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಲಾಯಕ್ ಎಂದು ಕರ್ನಾಟಕ ಕಾಂಗ್ರೆಸ್ ಟೀಕೆ ಮಾಡಿದೆ.

Advertisement

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್,  ಪ್ರವಾಹದಿಂದ ತತ್ತರಿಸಿದ ರಾಜ್ಯಕ್ಕೆ ಮಧ್ಯಂತರ ₹5000 ಕೋಟಿ ನೀಡದೆ, ರಾಷ್ಟ್ರೀಯ ವಿಪತ್ತೆಂದು ಘೋಷಿಸದೆ, ₹1 ಲಕ್ಷ ಕೋಟಿ ನಷ್ಟವಾದರೂ ಹಣ ಒದಗಿಸದೆ, ಜವಾಬ್ದಾರಿ & ಕರ್ತವ್ಯ ನಿರ್ವಹಿಸದೆ ಕೇಂದ್ರ ಕಣ್ಮುಚ್ಚಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತುಘಲಕ್ ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಲಾಯಕ್ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

ನೆರೆ ಪರಿಹಾರ ರಾಜ್ಯದ ಹಕ್ಕು, ರಾಜ್ಯದ ಹಕ್ಕನ್ನು ಪಡೆಯಲಾಗದ ಹೇಡಿಯೇ ಸಿಎಂ?, ನಾಲಾಯಕ್ ಯಡಿಯೂರಪ್ಪ ರಾಜ್ಯಕ್ಕೆ ದ್ರೋಹವೆಸಗಿದ್ದಾರೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದೆ.

 

Advertisement

Advertisement

Udayavani is now on Telegram. Click here to join our channel and stay updated with the latest news.

Next