Advertisement

ಚಾಮರಾಜನಗರ ಆಸ್ಪತ್ರೆಯಲ್ಲಿ ಸಾವು ಪ್ರಕರಣ : ಸಚಿವ ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

07:21 PM May 13, 2021 | Team Udayavani |

ಚಾಮರಾಜನಗರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋವಿಡ್-19ರ ಸಮಸ್ಯೆಗಳ ನಿಗಾವಣೆಗೆ ರಚಿಸಲಾದ ಸಮಿತಿಯ ವರದಿಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಹೀಗಾಗಿ, ಮೂರೇ ಮಂದಿ ಮೃತಪಟ್ಟಿರುವುದು ಎಂದು ಸಮರ್ಥಿಸಿಕೊಂಡ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಅಲ್ಲದೇ ಈ ಘಟನೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಒತ್ತಾಯಿಸಿದರು.

Advertisement

ಗುರುವಾರ, ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜವಾಬ್ದಾರಿಯುತ ಸಚಿವರಾಗಿರುವ ಸುಧಾಕರ್ ಅವರು ಘಟನೆ ನಡೆದ ಮಾರನೆಯ ದಿನ ಚಾ.ನಗರಕ್ಕೆ ಬಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಈ ಪ್ರಕರಣದ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಯ ನಂತರ ನಿಖರವಾಗಿ ತಿಳಿದು ಹೇಳುತ್ತೇನೆ ಎನ್ನಬಹುದಿತ್ತು. ಅಥವಾ ವೈದ್ಯರಿಂದ ಮಾಹಿತಿಯನ್ನು ಪಡೆದು ಇಷ್ಟು ಜನ ಮರಣ ಹೊಂದಿದ್ದಾರೆ ಎಂದು ತಿಳಿಸಬಹುದಿತ್ತು. ಆದರೆ ಅವರು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ ಎಂದರು.

ಇದನ್ನೂ ಓದಿ :ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 10,489 ಕೋವಿಡ್ ಪ್ರಕರಣ ಪತ್ತೆ, 308 ಮಂದಿ ಸಾವು

3 ಜನ ಮಾತ್ರ ಆಕ್ಸಿಜನ್ ಕೊರತೆಯಿಂದ ಇನ್ನುಳಿದವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಹಾಗಾಗಿ ಡಾ. ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆಮ್ಲಜನಕ ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯ. ಕೂಡಲೇ ಮುಖ್ಯಮಂತ್ರಿಯವರು ಅವರಿಂದ ರಾಜೀನಾಮೆ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೇ 304 ಸೆಕ್ಷನ್ ಅನ್ವಯಿಸಿ, ಈ ಸಾವಿಗೆ ಯಾರು ಯಾರು ಕಾರಣರಾಗಿದ್ದಾರೆ. ಆರೋಗ್ಯ ಸಚಿವರಿಂದ ಅಧಿಕಾರಿಗಳವರೆಗೆ ಅವರ ವಿರುದ್ಧ ಕೇಸ್ ದಾಖಲು ಮಾಡಬೇಕು. ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ಮೃತರಾದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next