Advertisement

ಪಕ್ಷ ವಿರೋಧಿ ಚಟುವಟಿಕೆ ಕಾಂಗ್ರೆಸ್ಸಿಂದ 14 ಬಂಡಾಯ ಶಾಸಕರ ವಜಾ

09:51 AM Aug 01, 2019 | Nagendra Trasi |

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ 14 ಅನರ್ಹ ಶಾಸಕರನ್ನು ಕಾಂಗ್ರೆಸ್‌ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.

Advertisement

14 ಶಾಸಕರು ರಾಜೀನಾಮೆ ಕೊಟ್ಟ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಬಹುಮತ ಇಲ್ಲದೆ ಅಧಿಕಾರದ ಗದ್ದುಗೆಯಿಂದ ಕೆಳಗಿಳಿದಿತ್ತು.

ಈ ಹಿನ್ನೆಲೆಯಲ್ಲಿ ಮಹೇಶ್‌ ಕುಮಠಳ್ಳಿ, ಶ್ರೀಮಂತ ಪಾಟೀಲ್‌, ರಮೇಶ್‌ ಜಾರಕಿಹೊಳಿ, ಪ್ರತಾಪ್‌ಗೌಡ ಪಾಟೀಲ್‌, ಶಿವರಾಮ್‌ ಹೆಬ್ಬಾರ್‌, ಬಿ.ಸಿ.ಪಾಟೀಲ್‌, ಆರ್‌. ಶಂಕರ್‌, ಆನಂದ್‌ಸಿಂಗ್‌, ಡಾ.ಕೆ.ಸುಧಾಕರ್‌, ಬಿ.ಎ. ಬಸವರಾಜ್‌, ಎಸ್‌. ಟಿ.ಸೋಮಶೇಖರ್‌, ಮುನಿರತ್ನ, ಆರ್‌.ರೋಷನ್‌ ಬೇಗ್‌ ಹಾಗೂ ಎಂಟಿಬಿ ನಾಗರಾಜ್‌ ಅವರನ್ನು ಪಕ್ಷದಿಂದ ವಜಾಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next