Advertisement

Final ಪ್ರವೇಶಿಸಲು ವಿಫಲವಾದ ಕಾಂಗ್ರೆಸ್: ನಳಿನ್ ಕುಮಾರ್

06:21 PM Dec 03, 2023 | Team Udayavani |

ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿದ್ದಾರೆ.

Advertisement

ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಕಾಂಗ್ರೆಸ್‌ ಫೈನಲ್ ಪ್ರವೇಶಿಸಲು ವಿಫಲವಾಗಿದೆ ಎನ್ನುವುದನ್ನು ಈ ಫಲಿತಾಂಶ ದೃಢಪಡಿಸಿದಂತಾಗಿದೆ. ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ‌ಬಿಜೆಪಿ ಮತ್ತೆ ಜಯಭೇರಿ ಗಳಿಸಲು ಮೂರು ರಾಜ್ಯಗಳ ಗೆಲುವು ಹೆಚ್ಚಿನ ಶಕ್ತಿ ನೀಡಿದೆ. ವಿರೋಧ ಪಕ್ಷಗಳ ಅನುಕೂಲಕರ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next