Advertisement

ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ತೇನೆ, “ಕೈ”ಮುಖಂಡನ ಗೂಂಡಾಗಿರಿ!

11:16 AM Feb 20, 2018 | Team Udayavani |

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಘಟನೆ ಬೆನ್ನಲ್ಲೇ ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣಸ್ವಾಮಿ ಬಿಬಿಎಂಪಿ ಕಂದಾಯ ಕಚೇರಿಗೆ ಬಂದು ಗೂಂಡಾಗಿರಿ ನಡೆಸಿದ ಘಟನೆ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇದೀಗ ನಾರಾಯಣಸ್ವಾಮಿಯನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗೃಹ ಸಚಿವರಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಶಾಸಕ ಭೈರತಿ ಬಲಗೈ ಬಂಟ ನಾರಾಯಣಸ್ವಾಮಿ ಹೊರಮಾವು ಬಿಬಿಎಂಪಿ ಕಚೇರಿಗೆ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದ್ದ ಘಟನೆ ನಡೆದಿತ್ತು. ಬಿಬಿಎಂಪಿ ಕಚೇರಿಯಲ್ಲಿ ನಾರಾಯಣಸ್ವಾಮಿ ನಡೆಸಿದ ಗೂಂಡಾಗಿರಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಈ ಸುದ್ದಿ ಟಿವಿ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿತ್ತು. ಬಿಬಿಎಂಪಿ ಕಚೇರಿಗೆ ನುಗ್ಗಿ ಚೆಂಗಲ್ ರಾಯಪ್ಪ ಹಾಗೂ ಕಚೇರಿಗೂ ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿರುವುದಾಗಿ ವರದಿ ಹೇಳಿದೆ.

ಏತನ್ಮಧ್ಯೆ ನಾರಾಯಣಸ್ವಾಮಿ ತಪ್ಪು ಮಾಡಿದ್ರೆ ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next