Advertisement
ಸಿಎಂ ಸಿದ್ದರಾಮಯ್ಯ ಅವರು ”ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಪರಸ್ಪರ ಎದುರಾಳಿಗಳಾಗಿದ್ದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಮತ್ತು ನಾನು ಇಂದು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದೆವು. ಶ್ರೀನಿವಾಸ ಪ್ರಸಾದ್ ಅವರ ಹೋರಾಟದ ಬದುಕು ಮತ್ತು ಜನಪರ ಕಾಳಜಿಯ ಬಗ್ಗೆ ನಾನು ಸದಾ ಗೌರವ ಇಟ್ಟುಕೊಂಡವನು. “ಸ್ನೇಹ ಶಾಶ್ವತ, ಮುನಿಸು ಕ್ಷಣಿಕ’’ ಎಂದು ನಂಬಿರುವ ನನಗೆ ಇಂದು ಅದರ ಪ್ರತ್ಯಕ್ಷ ಅನುಭವವಾಯಿತು. ರಾಜಕೀಯದಿಂದ ನಿವೃತ್ತರಾದರೂ ಶ್ರೀನಿವಾಸ ಪ್ರಸಾದ್ ಅವರು ಹೊಸ ತಲೆಮಾರಿಗೆ ಮಾರ್ಗದರ್ಶಕರಾಗಿ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರಬೇಕು. ಇದಕ್ಕೆ ಬೇಕಾದ ಆರೋಗ್ಯ ಮತ್ತು ಆಯುಷ್ಯ ಅವರಿಗೆ ಒದಗಿ ಬರಲಿ ಎಂದು ಹಾರೈಸುತ್ತೇನೆ” ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
Related Articles
ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
Advertisement
ಚಳ್ಳಕೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಶ್ರೀನಿವಾಸ ಪ್ರಸಾದ್ ನಮ್ಮ ದೊಡ್ಡ ಶಕ್ತಿ. ಖಂಡಿತವಾಗಿಯೂ ನಮಗೆ ಸಹಕಾರ ಕೊಡುತ್ತಾರೆ. ರವಿವಾರ ನಾನು ಮೈಸೂರಿಗೆ ಹೋದ ಬಳಿಕ ಅವರ ಜತೆ ಮಾತನಾಡುತ್ತೇನೆ. ಅವರ ಅಸಮಾಧಾನ ಸರಿಪಡಿಸುತ್ತೇನೆ ಎಂದರು.