Advertisement

ಮೈತ್ರಿ ಸರ್ಕಾರದ ಭವಿಷ್ಯ ಕಾಂಗ್ರೆಸ್ ಕೈಯಲ್ಲಿದೆ: ದೇವೇಗೌಡ ಅಸಮಾಧಾನ

12:40 PM Jun 22, 2019 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೇಕು ಅಂತ ನಾವು ಹೇಳಿಲ್ಲ. ಸಿಎಂ ಹುದ್ದೆ ನಮಗೆ ಬೇಕು ಅಂತ ಕೇಳಿಲ್ಲ. ಒಂದು ವರ್ಷದಿಂದ ಎಲ್ಲವನ್ನೂ ಸಹಿಸಿಕೊಂಡಿದ್ದೇನೆ. ಏನಾದ್ರು ಮಾತನಾಡಿದ್ದೇನಾ? ಸಮ್ಮಿಶ್ರ ಸರ್ಕಾರವನ್ನು ಉಳಿಸೋದು, ಬೀಳಿಸೋದು ಕಾಂಗ್ರೆಸ್ ನವರ ಕೈಯಲ್ಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಸಮಾಧಾನ ಹೊರಹಾಕಿದ್ದಾರೆ.

Advertisement

ಶುಕ್ರವಾರ ಪದ್ಮನಾಭನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಸಿದ್ದರಾಮಯ್ಯನವರೇ ರಾಹುಲ್ ಗಾಂಧಿಗೆ ದೂರು ನೀಡಿದ್ದಾರಂತೆ. ಹೀಗಾಗಿ ಎಲ್ಲವೂ ಕಾಂಗ್ರೆಸ್ ನವರ ಕೈಯಲ್ಲಿಯೇ ಇದೆ ಎಂದರು.

ಸಾರ್ವತ್ರಿಕ ಚುನಾವಣೆ ಆದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಶಕ್ತಿ ಸ್ವಲ್ಪ ಕಡಿಮೆ ಆಗಿದೆ. ಸರ್ಕಾರ ಎಷ್ಟು ದಿನ ಇರಬೇಕು ಎಂದು ಕಾಂಗ್ರೆಸ್ ಗೆ ಬಿಟ್ಟ ವಿಚಾರ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರದ ಬಗ್ಗೆ ಹಾಗೂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next