Advertisement

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ: ಖಾದರ್‌

09:49 AM Nov 30, 2019 | Team Udayavani |

ಹೊಸಪೇಟೆ: ಮಹಾರಾಷ್ಟ್ರ ಮತ್ತು ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಒಂದೇ ರೀತಿಯದ್ದು. ಇದರಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಈಗಾಗಲೇ ಯಶ ಕಂಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೂಡ ಯಶಸ್ವಿಯಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್‌ ಹೇಳಿದರು.

Advertisement

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ದೇಶದಲ್ಲಿ ರಾತ್ರೋ ರಾತ್ರಿ ಸರ್ಕಾರಗಳು ರಚನೆಯಾಗುತ್ತವೆ. ಬೆಳಗಾಗೋದರೊಳಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ. ಹೀಗಾದರೆ ದೇಶದ ಪರಿಸ್ಥಿತಿ ಏನು ಎಂಬುದೇ ತಿಳಿಯುತ್ತಿಲ್ಲ. ಯಾವುದೇ ಒಂದು ಸರ್ಕಾರ ರಚನೆಯಾದಾಗ ಸಂಭ್ರಮಾಚರಣೆ ಮನೆ ಮಾಡಿರುತ್ತದೆ. ಆದರೆ ಬಿಜೆಪಿಯವರು ಅಧಿಕಾರ ಹಿಡಿಯಲೇಬೇಕೆಂದು ತರಾತುರಿಯಲ್ಲಿ ಜನ ನಿದ್ರೆಯಲ್ಲಿದ್ದಾಗ ಅಧಿಕಾರ ಸ್ವೀಕಾರ ಮಾಡಿದರು. ಆದರೂ ಪ್ರಜಾಪ್ರಭುತ್ವದಲ್ಲಿ ನಮಗೆ ವಿಶ್ವಾಸವಿತ್ತು. ಶಿವಸೇ ನೆಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿ ಕೊಂಡೆವು. ಅದೇ ರೀತಿ ಮುಂದೊಮ್ಮೆ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿ ದ್ದೇವೆ ಎಂದರು.

ಚುನಾವಣೆ ಸಂದರ್ಭದಲ್ಲಿ ಅನುದಾನ ಬಿಡುಗಡೆ ಹಾಗೂ ಆನಂದ ಸಿಂಗ್‌ ಅವರನ್ನು ಮಂತ್ರಿಯನ್ನಾಗಿ ಮಾಡಲಾಗುವುದು ಎಂದು ಬಿಜೆಪಿ ಮತದಾರಿಗೆ ಭರವಸೆ ನೀಡುತ್ತಿದೆ. ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಒಂದು ವೇಳೆ ಚುನಾವಣಾ ಆಯೋಗ ನಿರ್ಲಕ್ಷ್ಯವಹಿಸಿದರೆ ಅದರ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next