Advertisement

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

11:49 PM Jul 20, 2024 | Team Udayavani |

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರಕಾರದಲ್ಲಿ ಆಗಿರುವ ಹಗರಣಗಳ ಬಗ್ಗೆ ಮೊದಲು ಉತ್ತರ ಕೊಟ್ಟು ಅನಂತರ ಬಿಜೆಪಿ ಸರಕಾರದ ಅವಧಿಯ ಹಗರಣಗಳ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಯಾರೇ ತಪ್ಪು ಮಾಡಿದ್ದರೂ ತನಿಖೆ ನಡೆಸಿ ಶಿಕ್ಷೆ ಆಗಲಿ. ಅದಕ್ಕೆ ನಾವು ಸಿದ್ಧರಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳು ಹೆಚ್ಚಾಗಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ. ದುರುಪಯೋಗ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸದನದಲ್ಲಿ ಸರಿಯಾಗಿ ಉತ್ತರ ಕೊಡುತ್ತಿಲ್ಲ ಎಂದರು.

ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧಿಕಾರಿ ಚಂದ್ರಶೇಖರ್‌ ಅವರ ಡೆತ್‌ನೋಟ್‌ನಲ್ಲಿರುವುದನ್ನು ಓದುತ್ತಿದ್ದಂತೆ ಮುಖ್ಯಮಂತ್ರಿಗಳು ಮೌನವಹಿಸಿದ್ದಾರೆ. ಆರಂಭದಲ್ಲಿ ಸಚಿವ ನಾಗೇಂದ್ರ ತಪ್ಪು ಮಾಡಿಲ್ಲ ಎನ್ನುತ್ತಿದ್ದರು. ನಾಗೇಂದ್ರ ಬಂಧನವಾದ ಅನಂತರ ಸರಕಾರ ತಪ್ಪು ಮಾಡಿಲ್ಲ ಎನ್ನುತ್ತಿದ್ದಾರೆ. ಮುಖ್ಯಮಂತ್ರಿಗಳ ಹೇಳಿಕೆಗಳಲ್ಲೇ ಈ ಹಗರಣ ನಡೆದಿರುವುದು ಸತ್ಯ ಎಂಬುದು ತಿಳಿಯುತ್ತಿದೆ ಎಂದರು.

ಬೆದರಿಕೆಗೆ ಹೆದರುವುದಿಲ್ಲ
ಬಳ್ಳಾರಿಯ ಸಂಡೂರಿನಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಮಟ್ಟದ ವಿಶೇಷ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ವಾಲ್ಮೀಕಿ ನಿಗಮದ ಹಗರಣ ವಿರೋಧಿಸಿ ಹೋರಾಟ ಮಾಡಿದ್ದಕ್ಕೆ, ಬಿಜೆಪಿ ಆಡಳಿತಾವಧಿಯಲ್ಲಿನ ಭ್ರಷ್ಟಾಚಾರ ತನಿಖೆ ಮಾಡಿಸುವುದಾಗಿ ಬೆದರಿಕೆ ಹಾಕಿರುವ ಸಿಎಂ ಸಿದ್ದರಾಮಯ್ಯರ ಗೊಡ್ಡು ಬೆದರಿಕೆಗೆಲ್ಲ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next