Advertisement

Congress Governmnet: ನಿಗಮ-ಮಂಡಳಿ ಸದಸ್ಯರ ಆಯ್ಕೆ ಸಮಿತಿ ಪರಿಷ್ಕರಣೆ

11:24 PM Jul 09, 2024 | Team Udayavani |

ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳ ನಿರ್ದೇಶಕರು ಮತ್ತು ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಈ ಹಿಂದೆ ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯನ್ನು ಪರಿಷ್ಕರಣೆ ಮಾಡಿರುವ ಸರಕಾರ, ಪಕ್ಷದ ಪ್ರತಿನಿಧಿಗಳು ಸೇರಿದಂತೆ 11 ಜನರನ್ನು ಸೇರಿಸಿದೆ.

Advertisement

ಪರಿಷ್ಕೃತ ಸಮಿತಿಯಲ್ಲಿ ಡಾ.ಜಿ. ಪರಮೇಶ್ವರ ಅಧ್ಯಕ್ಷರಾಗಿದ್ದಾರೆ. ಸಚಿವರಾದ ಕೆ.ಜೆ. ಜಾರ್ಜ್‌, ಸತೀಶ ಜಾರಕಿಹೊಳಿ, ಸಂತೋಷ್‌ ಲಾಡ್‌, ಡಾ. ಶರಣಪ್ರಕಾಶ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌, ಶಾಸಕರಾದ ಡಾ| ಎಂ. ರೂಪಕಲಾ, ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ. ಹರೀಶ್‌ ಕುಮಾರ್‌ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಸಮಿತಿಯು ಕೂಡಲೇ ಕಾರ್ಯಪ್ರವೃತ್ತರಾಗಿ ತಿಂಗಳ ಒಳಗೆ ನಿಗಮ/ ಮಂಡಳಿಗಳಿಗೆ ನಿರ್ದೇಶಕರು-ಸದಸ್ಯರ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next