Advertisement

ಕಾಂಗ್ರೆಸ್‌ ನಕಲಿ ಸಿಡಿ ಸೃಷ್ಟಿಸಿದೆ

12:09 PM May 22, 2018 | |

ಬೆಂಗಳೂರು: ವಿಶ್ವಾಸಮತ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಶಿವರಾಮ್‌ ಹೆಬ್ಟಾರ್‌ಗೆ ಬಿಜೆಪಿ ಆಮಿಷ ಒಡ್ಡಿದೆ ಎಂದು ಕಾಂಗ್ರೆಸ್‌ ನಕಲಿ ಸಿಡಿ ಸೃಷ್ಟಿಸಿದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟೀಕಿಸಿದರು.

Advertisement

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಸಿದ್ಧತೆಗಳ ಕುರಿತ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ  ತಮಗೆ ಯಾವುದೇ ಆಮಿಷ ಒಡ್ಡಿರಲಿಲ್ಲ. ತಮ್ಮ ಕುಟುಂಬದವರನ್ನೂ ಸಂಪರ್ಕಿಸಿರಲಿಲ್ಲ ಎಂದು ಸ್ವತಃ ಶಾಸಕ ಶಿವರಾಮ್‌ ಹೆಬ್ಟಾರ್‌ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ ದುರುದ್ದೇಶದಿಂದ ನಕಲಿ ಸಿಡಿ ಸೃಷ್ಟಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು.

ನಕಲಿ ಸಿಡಿ, ನಕಲಿ ವೋಟರ್‌ ಐಡಿ, ಬೋಗಸ್‌ ಮತದಾರರನ್ನು  ಸೃಷ್ಟಿಸುವುದು ಕಾಂಗ್ರೆಸ್‌ನ ಕಾರ್ಯಸೂಚಿಯಾಗಿದೆ. ಈ ಕಾರ್ಯಗಳಿಂದಲೇ ಕಾಂಗ್ರೆಸ್‌ ಏನು ಎಂಬುದು ಜನರಿಗೆ ಗೊತ್ತಾಗುತ್ತಿದೆ ಎಂದು ಆರೋಪಿಸಿದ ಸದಾನಂದಗೌಡ, ರಾಜರಾಜೇಶ್ವರಿ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದನ್ನು ಪಕ್ಷ ಸವಾಲಾಗಿ ಸ್ವೀಕರಿಸಿದೆ.

ಕಾಂಗ್ರೆಸ್‌ನ ಯಾವುದೇ ತಂತ್ರಗಳು ಇಲ್ಲಿ ಫ‌ಲ ನೀಡುವುದಿಲ್ಲ. ಅಲ್ಲದೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹೊಂದಾಣಿಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಸಭೆಯಲ್ಲಿ ಶಾಸಕರಾದ ಡಾ. ಸಿ.ಎನ್‌.ಅಶ್ವತ್ಥನಾರಾಯಣ, ವಿ.ಸೋಮಣ್ಣ, ಗೂಳಿಹಟ್ಟಿ ಶೇಖರ್‌, ಪಕ್ಷದ ವಕ್ತಾರ ಅಶ್ವತ್ಥನಾರಾಯಣ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next