Advertisement

ಕಾಂಗ್ರೆಸ್ ನವರು ದಿಲ್ಲಿಗೆ ಹೋಗಿ ರಾಜ್ಯದ ಮಾನ ಕಳೆದಿದ್ದಾರೆ: ಬಿ.ಎಸ್ ಯಡಿಯೂರಪ್ಪ

06:57 PM Feb 08, 2024 | Team Udayavani |

ದಾವಣಗೆರೆ: ಕಾಂಗ್ರೆಸ್ ನವರು ಗ್ಯಾರಂಟಿ ಯೋಜನೆ ಭರವಸೆ ನೀಡಿ ಅಧಿಕಾರಕ್ಕೆ ಬಂದರು. ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿಲ್ಲ. ಅಭಿವೃದ್ಧಿ ಸಹ ಮಾಡಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಬಿಜೆಪಿ ಜಿಲ್ಲಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ದುಡ್ಡಲ್ಲಿ ಜಾಹೀರಾತು ನೀಡಿ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದೆ. ಕೇಂದ್ರದಿಂದ ಬರ ಪರಿಹಾರ ಬಂದಿಲ್ಲ ಎಂದು ಹೇಳಿ, ದಿಲ್ಲಿಗೆ ಹೋಗಿ ರಾಜ್ಯದ ಮಾನ ಕಳೆಯುವ ಕೆಲಸ ಕಾಂಗ್ರೆಸ್ ನವರು ಮಾಡಿದ್ದಾರೆ ಎಂದು ದೂರಿದರು.

ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ 6 ಸಾವಿರ ಕೋಟಿ ಕೊಟ್ಟಿದೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಲೊಕಸಭಾ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ದೇಶ ವಿಭಜನೆ ಮಾಡುವವರನ್ನು ಕೆಲವೇ ದಿನಗಳಲ್ಲಿ ಜನರು ಅಪ್ರಸ್ತುತ ಮಾಡಲಿದ್ದಾರೆ. ರಾಜ್ಯದಲ್ಲಿ ಎಲ್ಲ‌ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಣ ತೊಟ್ಟಿದ್ದೇವೆ. ಅದಕ್ಕೆ ಜನರ ಸಹಕಾರ ಬೇಕು ಎಂದು ಯಡಿಯೂರಪ್ಪ ಹೇಳಿದರು.

ಪದಗ್ರಹಣ ಸಮಾರಂಭಕ್ಕೆ ಸಂಸದ ಜಿಎಂ ಸಿದ್ದೇಶ್ವರ ಬಂದಿಲ್ಲ ಎಂದು ತಪ್ಪಾಗಿ ಭಾವಿಸಬೇಡಿ. ಅವರೊಟ್ಟಿಗೆ ದೂರವಾಣಿಯಲ್ಲಿ ಮಾತನಾಡಿದ್ದು ಅವರೇ ಕಾರ್ಯಕ್ರಮಕ್ಕೆ ಹೋಗಿ ಯಶಸ್ವಿಯಾಗಿ ಮಾಡಿ ಎಂದು ಹೇಳಿದರು. ಸಿದ್ದೇಶ್ವರ ಅವರನ್ನ ಕೂಡ ಗೌರವದಿಂದ ಕಾಣಬೇಕು. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಬಿಎಸ್ ವೈ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next