Advertisement

ಕಾಂಗ್ರೆಸ್‌ನಲ್ಲಿ ಹಿರಿತನಕ್ಕೆ ಗೌರವವಿಲ್ಲ…ಶೀಘ್ರ ರೆಡ್ಡಿ ಪಾರ್ಟಿ ಸೇರುತ್ತೇನೆ :ವಿರೂಪಾಕ್ಷ ಗೌಡ

07:26 PM Jan 06, 2023 | Team Udayavani |

ಗಂಗಾವತಿ: ಕಾಂಗ್ರೆಸ್ ಪಕ್ಷದಲ್ಲಿ ಹಿರಿತನಕ್ಕೆ ಬೆಲೆ ಇಲ್ಲಆದ್ದರಿಂದ ಶೀಘ್ರವೇ ಅಪಾರ ಬೆಂಬಲಿಗ ರೊಂದಿಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸೇರ್ಪಡೆಯಾಗಲಿರುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪಂ. ಮಾಜಿ ಉಪಾಧ್ಯಕ್ಷ ವಿರೂಪಾಕ್ಷಗೌಡ ಹೇರೂರು ತಿಳಿಸಿದ್ದಾರೆ.

Advertisement

ಅವರು ಸದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಹಾಗೂ ಶಿವರಾಜ ತಂಗಡಗಿ ನಿರ್ಲಕ್ಷ್ಯಕ್ಕೆ ಪಕ್ಷದ ಹಲವು ಕಾರ್ಯಕರ್ತರು ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಭವಿಷ್ಯವಿಲ್ಲ. ನಾವೆಲ್ಲ ಕಳೆದ 40 ವರ್ಷಗಳಿಂದ ಮಾಜಿ ಸಚಿವ ಶ್ರೀರಂಗದೇವರಾಯಲು ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿ ಗ್ರಾ.ಪಂ.ನಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದು ಇತ್ತೀಚಿನ ಪಕ್ಷದ ಮುಖಂಡರ ವರ್ತನೆಗೆ ಬೇಸರ ವ್ಯಕ್ತವಾಗುತ್ತಿದೆ. ಈಗಾಗಲೇ ಮೊಬೈಲ್ ಮೂಲಕ ರೆಡ್ಡಿಯವರೊಂದಿಗೆ ಮಾತನಾಡಿದ್ದು, ಶೀಘ್ರವೇ ಆಪ್ತರ ಜತೆ ಮಾತುಕತೆ ನಡೆಸಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸೇರಿ ಜನಾರ್ದನ ರೆಡ್ಡಿ ಗೆಲುವಿಗೆ ಶ್ರಮಿಸುವುದಾಗಿ ವಿರೂಪಾಕ್ಷಗೌಡ ಹೇರೂರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next