Advertisement

ಪ್ರತ್ಯೇಕ ಧ್ವಜ ಸಮಿತಿ: ಹೈಕಮಾಂಡ್‌ ಗರಂ

04:20 AM Jul 19, 2017 | Team Udayavani |

ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಮಾಡುವ ಕುರಿತು ಪರಿಶೀಲನೆ ನಡೆಸಿ ವರದಿ ನೀಡಲು ರಾಜ್ಯ ಸರಕಾರ ಸಮಿತಿ ರಚಿಸಿರುವುದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಗರಂ ಆಗಿದೆ. ಸಮಿತಿ ರಚನೆ ಕುರಿತು ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ, ರಾಜ್ಯ ಸರಕಾರದ ತೀರ್ಮಾನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ. ರಾಷ್ಟ್ರಕ್ಕೆ ಒಂದು ಧ್ವಜ ಇರಬೇಕಾದರೆ, ರಾಜ್ಯ ಸರಕಾರ ಪ್ರತ್ಯೇಕವಾಗಿ ಮತ್ತೂಂದು ಧ್ವಜ ಇರಬೇಕೆಂದು ಮಾಡಿದರೆ, ದೇಶದ ಏಕತೆಗೆ ಧಕ್ಕೆ ತಂದಂತಾಗುತ್ತದೆ. ರಾಜ್ಯ ಸರಕಾರ ಒಕ್ಕೂಟ ವ್ಯವಸ್ಥೆಯ ವಿರೋಧಿ ನಡೆ ತೀರ್ಮಾನ ತೆಗೆದುಕೊಂಡಂತಾಗುತ್ತದೆ. ಸರಕಾರದ ಈ ತೀರ್ಮಾನ ವಾಪಸ್‌ ಪಡೆಯುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next