Advertisement

ಕಾಂಗ್ರೆಸ್ ಸೋಲಿನ ಭಯದಿಂದ ಆರೋಪ ಮಾಡುತ್ತಿದೆ: ಯಡಿಯೂರಪ್ಪ ಕಿಡಿ

01:54 PM Nov 18, 2022 | Team Udayavani |

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲಿನ ಭಯದಿಂದ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ಮತದಾರ ಪಟ್ಟಿಯಲ್ಲಿ ಅಕ್ರಮ ಕಾಂಗ್ರೆಸ್ ನಾಯಕರು ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಕಾಂಗ್ರೆಸ್ಸಿಗರ ಆರೋಪದಲ್ಲಿ ಸತ್ಯಾಂಶವಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ತನಿಖೆ ನಡೆಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಅಕ್ರಮಗಳ ಬಗ್ಗೆ ದಾಖಲೆ ಇದ್ದರೆ ಕೊಡಲಿ, ತನಿಖೆ ನಡೆಸುತ್ತೇವೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲಿನ ಭಯದಿಂದ ಈ ರೀತಿ ಆರೋಪಗಳನ್ನು ಮಾಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ’ ಎಂದರು.

ಮುರುಘಾ ಮಠವನ್ನು ಸರ್ಕಾರ ವಶಕ್ಕೆ ಪಡೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿ , ‘ಕಾನೂನಿನ ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಗುಜರಾತ್ ಚುನಾವಣೆಯನ್ನು ಬಿಜೆಪಿ ಪಕ್ಷ 2/3 ಮೆಜಾರಿಟಿಯಲ್ಲಿ ಗೆಲುವು ಸಾಧಿಸುತ್ತದೆ ಎಂದು ಭವಿಷ್ಯ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next