Advertisement

BJP ಯೋಜನೆಗಳಿಗೆ ಕಾಂಗ್ರೆಸ್‌ ಟೇಪ್‌ ಕತ್ತರಿಸುತ್ತಿದೆ: ಸಂಸದ ಸುಧಾಕರ್‌

09:38 PM Sep 10, 2024 | Team Udayavani |

ಚಿಕ್ಕಬಳ್ಳಾಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ನಾಯಕರು ಟೇಪ್‌ ಕತ್ತರಿಸಿ ಹೆಸರು ಪಡೆದುಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಂಸದ ಡಾ.ಕೆ.ಸುಧಾಕರ್‌ ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು.

Advertisement

ಮಂಗಳವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆಯಡಿ ಕೋಲಾರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ನೀರು ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ 9,200 ಕೋಟಿ ರೂ.ಅನುದಾನವನ್ನು ಯೋಜನೆಗೆ ನೀಡಿದೆ. ಆದರೆ ಈ ಬಗ್ಗೆ ಕಾಂಗ್ರೆಸ್‌ ನಾಯಕರು ಒಂದೇ ಒಂದು ಮಾತು ಹೇಳಿಲ್ಲ. ಮನಸ್ಸು ಮಾಡಿದ್ದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಯೋಜನೆ ಉದ್ಘಾಟನೆ ಮಾಡಬಹುದಿತ್ತು. ಬೇಕಿದ್ದರೆ ಇದರ ಕೀರ್ತಿಯನ್ನು ಕಾಂಗ್ರೆಸ್‌ ಸರ್ಕಾರ ಪಡೆದುಕೊಳ್ಳಲಿ. ಆದರೆ, 2ನೇ ಹಂತದ ಕಾಮಗಾರಿ ಪೂರ್ಣಗೊಳಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next